25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಚ್ಚಿನ ಬ್ರಾಂಚ್ ಸಮಿತಿ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಮಚ್ಚಿನ ಗ್ರಾಮದ ಕಲ್ಲಗುಡ್ಡೆಯಲ್ಲಿ ನಿರ್ಮಿಸಿದ ಮನೆಯನ್ನು ಕಣಿಯೂರು ಬ್ಲಾಕ್ ಅಧ್ಯಕ್ಷ ಮುಸ್ತಫಾ ಬಂಗೇರಕಟ್ಟೆ ಅವರ ಸಮ್ಮುಖದಲ್ಲಿ ಬಡ ಮಹಿಳೆಗೆ ಹಸ್ತಾಂತರ ಮಾಡಲಾಯಿತು.

ಬದ್ರಿಯಾ ಜುಮ್ಮಾ ಮಸೀದಿ ಬಂಗೇರಕಟ್ಟೆ ಖತೀಬರಾದ ಸಲ್ಮಾನ್ ಅನ್ಸಾರಿ ಅವರು ದುವಾ ಆಶಿರ್ವಾದಗೈದರು. ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಉದ್ಘಾಟನೆ ಮಾಡಿದರು. ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜಾತ್ತೂರು ಮನೆ ಕೀ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಿದರು. ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಹನೀಫ್ ಟಿ. ಎಸ್, ಹಕೀಮ್, ಇಕ್ಬಾಲ್ ಬಳ್ಳಮಂಜ, ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರು ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಲಾಯಿಲ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದಿಂದ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!