35.9 C
ಪುತ್ತೂರು, ಬೆಳ್ತಂಗಡಿ
February 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆ.27 ರಂದು ಗ್ರಾ.ಪಂ. ಅಧ್ಯಕ್ಷ ಪುನೀತ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು‌. ಸಾಮಾಜಿಕ ವಲಯ ಅರಣ್ಯಾಧಿಕಾರಿ ಲೋಕೇಶ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು.

ಮೆಸ್ಕಾಂ ಇಲಾಖೆಯ ಜೆಇ ಸಭೆಗೆ ಬರಬೇಕು. ಅವರ ಬದಲಿಗೆ ಇನ್ನೋಬ್ಬರನ್ನು ಕಳುಹಿಸಿದರೆ ಆಗುವುದಿಲ್ಲ. ನಾವು ಕಳೆದ ಬಾರಿ ತಿಳಿಸಿ ಸಮಸ್ಯೆಗಳನ್ನು ಸರಿಪಡಿಸುವುದಾಗಿ ಹೇಳಿದ್ದರು ಆದರೆ ಇಂದಿನ‌ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿ ಜೆಇ ಸಭೆಗೆ ಹಾಜರಾಗುವಂತೆ ಗ್ರಾಮಸ್ಥರು ಆಗ್ರಹಿಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಉಪಾಧ್ಯಕ್ಷೆ ಸೆಲೆಸ್ಟಿನ್ ಡಿಸೋಜಾ ಸದಸ್ಯರುಗಳಾದ ಸುಸ್ಸಾನ ಡಿಸೋಜಾ, ದಿನೇಶ್‌ ಕರ್ಕೇರಾ, ಎಸ್. ಬೇಬಿ ಸುವರ್ಣಾ, ಸುಧಾಕರ ಆಳ್ವ, ಜಯಂತಿ, ಉಮೇಶ್, ಬೆನಡಿಕ್ಟ್ ಮಿರಾಂದ, ವಸಂತ ಪೂಜಾರಿ, ತುಳಸಿ ಬಿ., ರಾಜೇಶ್, ಐರಿನ್ ಮೊರಾಸ್, ಫಾರ್ಝನ, ವಿದ್ಯಾ ಪಿ. ಸಾಲಿಯಾನ್, ರುಬೀನಾ, ಗುಲಾಬಿ, ದಿನೇಶ್, ಅಂಗನವಾಡಿ ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.


ಪಿಡಿಓ ರಾಜ್ ಶೇಖರ್ ರೈ ಸ್ವಾಗತಿಸಿ , ಕಾರ್ಯದರ್ಶಿ ಯಶೋಧರ ವಂದಿಸಿದರು.

Related posts

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya
error: Content is protected !!