ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಬೆಳ್ತಂಗಡಿ ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದಲ್ಲಿ ನಡೆಯುತ್ತಿರುವ ಅವ್ಯವಸ್ಥೆ ಬೆಳಕಿಗೆ ಬಂದ ನಂತರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಸೂಕ್ತ ಕ್ರಮಗಳನ್ನು ಕೈಗೊಂಡು ನೂತನ ಮೇಲ್ವಿಚಾರಕರನ್ನು ನೇಮಿಸಿದ್ದರು, ಆದರೆ ಇದೀಗ ಹಾಸ್ಟೆಲ್‌ನಲ್ಲಿ ಸಮಸ್ಯೆಗಳು ಪರಿಹಾರವಾಗಿರುವ ಬಗ್ಗೆ ವರದಿಯಾಗಿದೆ.

ವಸತಿ ನಿಲಯ ಅವ್ಯವಸ್ಥೆಯಿಂದ ಕೂಡಿದ್ದು ಮೆನುವಿನಲ್ಲಿ ಹಾಕಿರುವ ಯಾವುದೇ ಆಹಾರ ಸರಿಯಾಗಿ ನೀಡುವುದಿಲ್ಲ, ಆಹಾರ ರುಚಿಯೂ ಇರುವುದಿಲ್ಲ. ಯಾವುದೇ ಕಾರ್ಯಕ್ರಮ ಜರುಗುವುದಿಲ್ಲ. ಚಟುವಟಿಕೆಗಳಾಗಲಿ ಯಾವುದು ನಡೆಯುವುದಿಲ್ಲ. ಶೌಚಾಲಯ, ಸ್ನಾನದ ಕೊಠಡಿ ಸೇರಿದಂತೆ ಸ್ವಚ್ಛತಾ ವ್ಯವಸ್ಥೆ ಹದಗೆಟ್ಟಿದೆ. ಭಾಷಾ ತಾರಾತಮ್ಯತೆ ಹೆಚ್ಚಾಗಿದೆ. ಶೈಕ್ಷಣಿಕ ಚಟುವಟಿಕೆಗೆ ಯಾವುದೇ ರೀತಿಯ ಪ್ರೋತ್ಸಾಹ ದೊರೆಯುತ್ತಿಲ್ಲ, ಊರಿನವರು ಮತ್ತು ಹೊರಗಿನವರು (ಘಟ್ಟದವರು) ಎಂಬ ಬೇಧ-ಭಾವ ನಡೆಯುತ್ತಿದೆ, ಎಂದು ನೊಂದ ವಿದ್ಯಾರ್ಥಿನಿಯರು ಆರೋಪಿಸಿದ್ದರು. ಆದರೆ ಇದೀಗ ನೂತನ ವಾರ್ಡನ್ ನಿಯೋಜನೆ ಬಳಿಕ ಈ ಎಲ್ಲಾ ಸಮಸ್ಯೆಗಳು ವಸತಿ ನಿಲಯದಲ್ಲಿ ಬಗೆಹರಿದಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಚೆನ್ನಾಗಿ ನೋಡಿಕೊಳ್ಳುತ್ತಾರೆ: ವಸತಿ ನಿಲಯದಲ್ಲಿ ಬೀಳ್ಕೂಡುಗೆ ಕಾರ್ಯಕ್ರಮ ನಡೆಸಿದ್ದಾರೆ. ಮೆನು ಚಾರ್ಟ್ನಲ್ಲಿ ಆಹಾರ ಸಮರ್ಪಕವಾಗಿ ಸಿಗುತ್ತಿದೆ. ಈ ಹಿಂದೆ ಇದ್ದ ಎಲ್ಲಾ ಸಮಸ್ಯೆಗಳು ಹೊಸ ವಾರ್ಡನ್ ಡಾ. ಅರ್ಷಿಯಾ ರವರು ಬಂದ ಮೇಲೆ ಬಗೆಹರಿಸಿದ್ದಾರೆ. ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಸಮಸ್ಯೆಗಳನ್ನು ತಿಳಿಸಿದರೆ ಸ್ಪಂದಿಸುತ್ತಾರೆ ಎಂದು ವಿದ್ಯಾರ್ಥಿನಿಯೋರ್ವರು ಸುದ್ದಿ ಉದಯ ಪತ್ರಿಕೆಗೆ ತಿಳಿಸಿದ್ದಾರೆ.

Related posts

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

Suddi Udaya

ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ವಿಶೇಷ ದರಕಡಿತ ಮಾರಾಟ: ಸೆ.3 ರಿಂದ 30ರವರೆಗೆ ಗೃಹೋಪಯೋಗಿ ವಸ್ತುಗಳ ಖರೀದಿಗೆ ಗ್ರಾಹಕರಿಗೆ ಭರ್ಜರಿ ಅವಕಾಶ

Suddi Udaya

ವಾಣಿ ಆಂ.ಮಾ. ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಧಿಕ ಕೆ. ಕಾಮತ್ ಆಯ್ಕೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya
error: Content is protected !!