September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

ಬೆಳ್ತಂಗಡಿ: ದ.ಕ ತಾಲೂಕು ಆಡಳಿತದ ವತಿಯಿಂದ ನೀಡಲಾದ ಹಿರಿಯ ಶ್ರೇಣಿ ನ್ಯಾಯಲಯದ ಮನೋಹರ್ ಕುಮಾರ್ ಅವರ ಸರ್ಕಾರಿ ಕಛೇರಿ ಉದ್ಘಾಟನೆ ಫೆ.28ರಂದು ಜರುಗಿತು.

ಬೆಳ್ತಂಗಡಿ ತಾಲೂಕು ಪಂಚಾಯತ್ ಕಚೇರಿ ಹಿಂಭಾಗ (ಸಾಮರ್ಥ್ಯ ಸೌಧದ ಬಳಿ ) ಆರಂಭಗೊಂಡ ನೂತನ ಕಚೇರಿಯನ್ನು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ವಿಧಾನ‌ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ,ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ತಹಿಶೀಲ್ದಾರ್ ಪೃಥ್ವಿ ಸಾನಿಕಮ್, ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಪಂಚ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಪದ್ಮನಾಭ ಮಾಲಾಡಿ, ಹಿರಿಯರಾದ ಕೃಷ್ಣಪ್ಪ ಪೂಜಾರಿ, ಜಿ.ಪಂ ಮಾಜಿ ಸದಸ್ಯರಾದ ಧರಣೇಂದ್ರ ಕುಮಾರ್, ಶೇಖರ್ ಕುಕ್ಕೇಡಿ, ಸಾಹುಲ್ ಹಮೀದ್, ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಹಿರಿಯ ನ್ಯಾಯವಾದಿಗಳಾದ ಬಿ.ಕೆ ಧನಂಜಯ್ ರಾವ್, ಶಶಿಕಿರಣ್, ಎಲೋಶಿಯಸ್ ಲೋಬೋ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಜಯವಿಕ್ರಮ್ ಕಲ್ಲಾಪು, ಚಿದಾನಂದ ಪೂಜಾರಿ ಎಲ್ದಕ್ಕ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ನಾಗೇಶ್ ಗೌಡ, ಜಗದೀಶ್ ಡಿ, ಯೋಗೀಶ್ ಮೇಲಂತಬೆಟ್ಟು, ರಾಜ್ ಶೇಖರ್ ಶೆಟ್ಟಿ, ವಂದನಾ ಭಂಡಾರಿ, ಲೋಕೇಶ್ವರಿ ವಿನಯಚ್ಚಂದ್ರ, ಪ್ರವೀಣ್ ಫೆರ್ನಾಂಡೀಸ್ ಹಳ್ಳಿಮನೆ, ಕೇಶವ ಬೆಳಾಲು,ನಿತೇಶ್ ಕುಕ್ಕೇಡಿ, ಸುನೀಲ್ ಶಿರ್ಲಾಲು, ಎಪಿಪಿ ದಿವ್ಯರಾಜ್, ಇಸ್ಮಾಯಿಲ್, ಇಸುಬು, ಶಿವಕುಮಾರ್, ನವೀನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಅಪರ ಸರ್ಕಾರಿ ವಕೀಲರುಹಿರಿಯ ಶ್ರೇಣಿ ನ್ಯಾಯಾಲಯ ಮನೋಹರ್ ಕುಮಾರ್ ಎ ನೂತನ‌ ಸಂಸ್ಥೆಗೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿ, ಸತ್ಕರಿಸಿದರು.

Related posts

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!