September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

ಬೆಳ್ತಂಗಡಿ: ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ‌ ಜ. 8 ರಿಂದ 12 ರವರೆಗೆ ನಡೆದ ಅಷ್ಟಬಂಧ ಬ್ರಹ್ಮಕಲಶೋತ್ಸವವು ಅರುವ ಬ್ರಹ್ಮಕಲಶೋತ್ಸವವೆಂದೇ ಜಿಲ್ಲಾದ್ಯಂತ ಪ್ರಸಿದ್ದಿ ಪಡೆದಿರುವುದಲ್ಲದೆ ಮಾದರಿಯೂ ಆಗಿರುವುದು ಸಂತಸ ತಂದಿದೆ. ಇದಕ್ಕೆಲ್ಲಾ ಅಜಿಲ ಸೀಮೆಯ ಭಕ್ತರು ಕಾರಣ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಅಳದಂಗಡಿ ಅರಮನೆ ಡಾl ಪದ್ಮಪ್ರಸಾದ ಅಜಿಲರು ಶ್ಲಾಘಿಸಿದರು.

ಅವರು ಫೆ.28 ರಂದು ದೇವಿ ಸನ್ನಿಧಿಯಲ್ಲಿ ನಡೆದ ಧೃಡ ಕಲಶ ಸಂದರ್ಭ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.


ಅಲ್ಪ ಸಮಯದ ಅವಧಿಯಲ್ಲಿ ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆದಿರುವುದಕ್ಕೆ ಸ್ಥಳೀಯ ಸಂಘ ಸಂಸ್ಥೆಗಳ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ, ವಿವಿಧ ತರಕಾರಿ ಇಲಾಖೆಗಳ, ದಾನಿಗಳ ಸಹಕಾರವೇ ಕಾರಣ ಎಂದು ಅವರು ಅಭಿನಂದಿಸಿದರು.


5 ದಿನಗಳ ಬ್ರಹ್ಮಕಲಶೋತ್ಸವದ ಅವಧಿಯಲ್ಲಿ ಸುಮಾರು 60,000 ಕ್ಕೂ ಮೇಲ್ಪಟ್ಟು ಭಕ್ತರು ಅನ್ನಪ್ರಸಾದವನ್ನು ಸ್ವೀಕರಿಸಿರುವುದು ಕ್ಷೇತ್ರದ ಮಹಿಮೆಯನ್ನು ಹೆಚ್ಚಿಸಿದೆ ಎಂದರು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ವೇದಿಕೆಯಲ್ಲಿದ್ದರು.


ಸಮಿತಿ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಖರ್ಚು- ವೆಚ್ಚಗಳ ಮಾಹಿತಿಯನ್ನು ವಿಸ್ತಾರವಾಗಿ ನೀಡಿದರು. ಸಂಚಾಲಕ ಶಿವಪ್ರಸಾದ ಅಜಿಲ ಸ್ವಾಗತಿಸಿದರು. ವೇದ ಮೂರ್ತಿ ನಡ್ವಂತಾಡಿ ಶ್ರೀಪಾದ ಪಾಂಗಾಣ್ಣಾಯ ಹಾಗೂ ಅರ್ಚಕ ಪ್ರಕಾಶ ಹೊಳ್ಳ ಅವರು ವಾಸ್ತು ಪೂಜೆ, ಕಲಶಾಭಿಷೇಕ ಇತ್ಯಾದಿ ವಿಧಾನಗಳನ್ನು ನೆರವೇರಿಸಿದರು.

Related posts

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya
error: Content is protected !!