30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಆಹಾರ ತಯಾರಿಕೆ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಇನ್ನೆರಡು ದಿನಗಳಲ್ಲಿಆದೇಶ : ಸಚಿವ ದಿನೇಶ್ ಗುಂಡೂರಾವ್

ಬೆಳ್ತಂಗಡಿ: ಆರೋಗ್ಯಕ್ಕೆ ಹಾನಿಕರವಾದ ಕೃತಕ ಬಣ್ಣಗಳನ್ನು ನಿಷೇಧಿಸಿರುವ ಆರೋಗ್ಯ ಇಲಾಖೆ, ಈಗ ಆಹಾರ ತಯಾರಿಕೆಯಲ್ಲಿ ಉಪಯೋಗಿಸುವ ಪ್ಲಾಸ್ಟಿಕ್ ನಿಷೇಧಕ್ಕೂ ಮುಂದಾಗಿದೆ. ಆಹಾರ ತಯಾರಿಕೆ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಸಂಬಂಧ ಸರಕಾರ ಇನ್ನೆರಡು ದಿನಗಳಲ್ಲಿ ಸುತ್ತೋಲೆ ಹೊರಡಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ರಾಜ್ಯದ 251 ಹೋಟೆಲ್‌ಗಳಲ್ಲಿ ಇಡ್ಲಿ ಸ್ಯಾಂಪಲ್ ಸಂಗ್ರಹಿಸಿದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ 52 ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಶೀಟ್ ಬಳಸಿ ಇಡ್ಲಿ ಬೇಯಿಸಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಪ್ಲಾಸ್ಟಿಕ್‌ಶೀಟ್ ಬಳಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲು ಇಲಾಖೆ ನಿರ್ಧರಿಸಿದೆ.

‘ಪ್ಲಾಸ್ಟಿಕ್ ಶೀಟ್‌ ಗಳು, ವಿಶೇಷವಾಗಿ ತೆಳುವಾದ ಪಾಲಿಥೀನ್ ಕವರ್ ಬಹಳ ಅಪಾಯಕಾರಿ. ಈ ಹಿಂದೆ ಹೋಟೆಲ್‌ಗಳಲ್ಲಿ ಇಡ್ಲಿ ತಯಾರಿಸುವ ಟ್ರೇಗೆ ಹತ್ತಿ ಬಟ್ಟೆ ಬಳಸುತ್ತಿದ್ದರು. ಹೋಟೆಲ್‌ಗಳಲ್ಲಿ ಬಟ್ಟೆ ಬದಲು ಪ್ಲಾಸ್ಟಿಕ್ ಶೀಟ್ ಬಳಸುತ್ತಿರುವ ವಿಚಾರ ಇತ್ತೀಚೆಗೆ ಗಮನಕ್ಕೆ ಬಂದಿತು. ಹಾಗಾಗಿ, ಇಲಾಖೆಯ ಅಧಿಕಾರಿಗಳು ವಿವಿಧೆಡೆ ತಪಾಸಣೆ ನಡೆಸಿ ಮಾದರಿ ಸಂಗ್ರಹಿಸಿದ್ದರು,” ಎಂದು ಸಚಿವ ದಿನೇಶ್ ಗುಂಡೂರಾವ್ ವಿವರಿಸಿದರು.

ಕಾರ್ಸಿನೋಜೆನ್ ಅಂಶ: ಪ್ಲಾಸ್ಟಿಕ್ ಹಾಳೆ ಬಳಕೆಯಿಂದ ಇಡ್ಲಿಯಲ್ಲಿ ‘ಕಾರ್ಸಿನೋಜೆನ್’ ಅಂಶ ಸೇರ್ಪಡೆಯಾಗುವ ಸಾಧ್ಯತೆಯಿದೆ. ಇದು ಕ್ಯಾನ್ಸರ್‌ಗೆ ಕಾರಣವಾಗಬಹುದು. ಯಾವುದೇ ಕಾರಣಕ್ಕೂ ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಬಳಕೆಗೆ ಅವಕಾಶವಿಲ್ಲ. ಬಳಸಿದವರ ಮೇಲೆ ದಂಡ ವಿಧಿಸುವುದು ಸೇರಿ ವಿವಿಧ ಕ್ರಮ ಕೈಗೊಳ್ಳಲಾಗುತ್ತಿದೆ,” ಎಂದು ಹೇಳಿದರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಆರೋಗ್ಯ ದೃಷ್ಟಿಯಿಂದ ಈಗಾಗಲೇ ಕಾಟನ್ ಕ್ಯಾಂಡಿ, ಮಂಚೂರಿಯನ್ ಮತ್ತು ಇತ್ತೀಚೆಗೆ ಕಬಾಬ್‌ ಗಳಲ್ಲಿ ಬಳಸಲಾಗುತ್ತಿದ್ದ ಕೃತಕ ಬಣ್ಣ, ಪಾನಿಪುರಿ ತಯಾರಿಕೆಯಲ್ಲಿ ಬಳಸುವ ನೀರಿನಲ್ಲಿ ಕ್ಯಾನ್ಸ‌ರ್ ಕಾರಕ ಬಣ್ಣಗಳಿಗೆ ನಿಷೇಧ ಹೇರಿರುವುದನ್ನು ಇಲ್ಲಿ ಸ್ಮರಿಸಬಹುದು.

Related posts

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!