March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

ಉಜಿರೆ: “ವಿದ್ಯಾರ್ಥಿಗಳಲ್ಲಿ ಬರೀ ಜ್ಞಾನ ಸಾಲದು, ಜ್ಞಾನದ ಜೊತೆ ಕೌಶಲ್ಯಗಳ ಅಗತ್ಯತೆ ಇದೆ” ಎಂದು ರಾಮನ್ ಪರಿಣಾಮವನ್ನು ಪ್ರಾತ್ಯಕ್ಷಿಕೆಯ ಮೂಲಕ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನ ಉಪನ್ಯಾಸಕಿ ಡಾ. ನೆಫಿಸತ್.ಪಿ ವಿದ್ಯಾರ್ಥಿಗಳೊಂದಿಗೆ ವಿಷಯ ವಿವರಿಸಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಿ.ವಿ ರಾಮನ್ ಅವರ ಸಾಶೋಧನೆಯಾದ ‘ರಾಮನ್ ಪರಿಣಾಮ’ಕ್ಕೆ ನೋಬೆಲ್ ಪ್ರಶಸ್ತಿ ದೊರೆತ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಿದ ವಿಜ್ಞಾನ ದಿನದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಪೋಸ್ಟರ್ ಮೇಕಿಂಗ್, ವಿಜ್ಞಾನ ಮಾದರಿ ತಯಾರಿ, ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಶಶಿಧರ್ ವಂದಿಸಿ, ನಿನಾದ್ ನಿರೂಪಿಸಿದರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

Suddi Udaya
error: Content is protected !!