March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೆ ಏರಿದ್ದು ಅಭಿವೃದ್ಧಿ ಹೊಂದಲಿರುವ ಉಜಿರೆ- ಪೆರಿಯಶಾಂತಿ ನಡುವಿನ ರಸ್ತೆಯ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಮೀಸಲಿರಿಸಿದ್ದು ಇದರ ಒಂದೊಂದೇ ಹಂತದ ಸಮೀಕ್ಷೆಗಳು ನಡೆಯುತ್ತಿದ್ದು, ಉಜಿರೆಯಿಂದ ಧರ್ಮಸ್ಥಳ ತನಕ ರಸ್ತೆ ಅಭಿವೃದ್ಧಿಗೆ ತೆರವುಗೊಳ್ಳಲಿರುವ ಖಾಸಗಿ ಜಾಗಗಳಲ್ಲಿರುವ ಮರಗಳ ಸಮೀಕ್ಷೆ ನಡೆಯುತ್ತಿದೆ.
ಕೆಲವೆಡೆ ಚತುಷ್ಪಥ, ಕೆಲವೆಡೆ ದ್ವಿಪಥವಾಗಿ ನಿರ್ಮಾಣಗೊಳ್ಳಲಿರುವ ಈ ರಸ್ತೆಯ ಅಭಿವೃದ್ಧಿ ವೇಳೆ ಹಲವು ಮರಗಳು ತೆರವುಗೊಳ್ಳಬೇಕಿದೆ. ಇದರ ಪ್ರಥಮ ಅಂಗವಾಗಿ ಖಾಸಗಿ ಜಾಗದಲ್ಲಿರುವ ಮರಗಳನ್ನು ಗುರುತಿಸಲಾಗುತ್ತಿದೆ. ತೆರವುಗೊಳ್ಳುವ ಪ್ರತಿ ಮರಕ್ಕೆ ಮೌಲ್ಯ ನಿಗದಿಪಡಿಸಿ‌ಕಟಾವಿನ ವೇಳೆ ಸ್ಥಳದ ಮಾಲೀಕರಿಗೆ ನೀಡಲಾಗುತ್ತದೆ.

ಸಮೀಕ್ಷೆ ಕಾರ್ಯದಲ್ಲಿ ಭೂಸ್ವಾಧೀನ ಅಧಿಕಾರಿ ಕಚೇರಿಯ ಆರ್ ಐ ನವೀನ್ ಕುಮಾರ್, ಸರ್ವೆಯರ್ ಕೃಷ್ಣಪ್ರಸಾದ್,ಬೆಳ್ತಂಗಡಿ ಅರಣ್ಯ ವಲಯದ ಡಿಆರ್ ಎಫ್ ಒ ರವಿಚಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya
error: Content is protected !!