24 C
ಪುತ್ತೂರು, ಬೆಳ್ತಂಗಡಿ
February 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೆ ಏರಿದ್ದು ಅಭಿವೃದ್ಧಿ ಹೊಂದಲಿರುವ ಉಜಿರೆ- ಪೆರಿಯಶಾಂತಿ ನಡುವಿನ ರಸ್ತೆಯ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಮೀಸಲಿರಿಸಿದ್ದು ಇದರ ಒಂದೊಂದೇ ಹಂತದ ಸಮೀಕ್ಷೆಗಳು ನಡೆಯುತ್ತಿದ್ದು, ಉಜಿರೆಯಿಂದ ಧರ್ಮಸ್ಥಳ ತನಕ ರಸ್ತೆ ಅಭಿವೃದ್ಧಿಗೆ ತೆರವುಗೊಳ್ಳಲಿರುವ ಖಾಸಗಿ ಜಾಗಗಳಲ್ಲಿರುವ ಮರಗಳ ಸಮೀಕ್ಷೆ ನಡೆಯುತ್ತಿದೆ.
ಕೆಲವೆಡೆ ಚತುಷ್ಪಥ, ಕೆಲವೆಡೆ ದ್ವಿಪಥವಾಗಿ ನಿರ್ಮಾಣಗೊಳ್ಳಲಿರುವ ಈ ರಸ್ತೆಯ ಅಭಿವೃದ್ಧಿ ವೇಳೆ ಹಲವು ಮರಗಳು ತೆರವುಗೊಳ್ಳಬೇಕಿದೆ. ಇದರ ಪ್ರಥಮ ಅಂಗವಾಗಿ ಖಾಸಗಿ ಜಾಗದಲ್ಲಿರುವ ಮರಗಳನ್ನು ಗುರುತಿಸಲಾಗುತ್ತಿದೆ. ತೆರವುಗೊಳ್ಳುವ ಪ್ರತಿ ಮರಕ್ಕೆ ಮೌಲ್ಯ ನಿಗದಿಪಡಿಸಿ‌ಕಟಾವಿನ ವೇಳೆ ಸ್ಥಳದ ಮಾಲೀಕರಿಗೆ ನೀಡಲಾಗುತ್ತದೆ.

ಸಮೀಕ್ಷೆ ಕಾರ್ಯದಲ್ಲಿ ಭೂಸ್ವಾಧೀನ ಅಧಿಕಾರಿ ಕಚೇರಿಯ ಆರ್ ಐ ನವೀನ್ ಕುಮಾರ್, ಸರ್ವೆಯರ್ ಕೃಷ್ಣಪ್ರಸಾದ್,ಬೆಳ್ತಂಗಡಿ ಅರಣ್ಯ ವಲಯದ ಡಿಆರ್ ಎಫ್ ಒ ರವಿಚಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ 27ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya
error: Content is protected !!