26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೆ ಏರಿದ್ದು ಅಭಿವೃದ್ಧಿ ಹೊಂದಲಿರುವ ಉಜಿರೆ- ಪೆರಿಯಶಾಂತಿ ನಡುವಿನ ರಸ್ತೆಯ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಮೀಸಲಿರಿಸಿದ್ದು ಇದರ ಒಂದೊಂದೇ ಹಂತದ ಸಮೀಕ್ಷೆಗಳು ನಡೆಯುತ್ತಿದ್ದು, ಉಜಿರೆಯಿಂದ ಧರ್ಮಸ್ಥಳ ತನಕ ರಸ್ತೆ ಅಭಿವೃದ್ಧಿಗೆ ತೆರವುಗೊಳ್ಳಲಿರುವ ಖಾಸಗಿ ಜಾಗಗಳಲ್ಲಿರುವ ಮರಗಳ ಸಮೀಕ್ಷೆ ನಡೆಯುತ್ತಿದೆ.
ಕೆಲವೆಡೆ ಚತುಷ್ಪಥ, ಕೆಲವೆಡೆ ದ್ವಿಪಥವಾಗಿ ನಿರ್ಮಾಣಗೊಳ್ಳಲಿರುವ ಈ ರಸ್ತೆಯ ಅಭಿವೃದ್ಧಿ ವೇಳೆ ಹಲವು ಮರಗಳು ತೆರವುಗೊಳ್ಳಬೇಕಿದೆ. ಇದರ ಪ್ರಥಮ ಅಂಗವಾಗಿ ಖಾಸಗಿ ಜಾಗದಲ್ಲಿರುವ ಮರಗಳನ್ನು ಗುರುತಿಸಲಾಗುತ್ತಿದೆ. ತೆರವುಗೊಳ್ಳುವ ಪ್ರತಿ ಮರಕ್ಕೆ ಮೌಲ್ಯ ನಿಗದಿಪಡಿಸಿ‌ಕಟಾವಿನ ವೇಳೆ ಸ್ಥಳದ ಮಾಲೀಕರಿಗೆ ನೀಡಲಾಗುತ್ತದೆ.

ಸಮೀಕ್ಷೆ ಕಾರ್ಯದಲ್ಲಿ ಭೂಸ್ವಾಧೀನ ಅಧಿಕಾರಿ ಕಚೇರಿಯ ಆರ್ ಐ ನವೀನ್ ಕುಮಾರ್, ಸರ್ವೆಯರ್ ಕೃಷ್ಣಪ್ರಸಾದ್,ಬೆಳ್ತಂಗಡಿ ಅರಣ್ಯ ವಲಯದ ಡಿಆರ್ ಎಫ್ ಒ ರವಿಚಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya
error: Content is protected !!