32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

ಬೆಳ್ತಂಗಡಿ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಮತ್ತು ಕಲ್ಮಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇತ್ರಾವತಿ ನದಿಯ ನಿಡಿಗಲ್ ಸೇತುವೆಗಳಿಗೆ ಕಲ್ಮಂಜ ಗ್ರಾಮ ಪಂಚಾಯಿತಿ ವತಿಯಿಂದ ಸಿಸಿಟಿವಿ ಅಳವಡಿಸಲಾಗಿದೆ.

ಇಲ್ಲಿನ ಸೇತುವೆಗಳಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ತಂದು ಸುರಿಯುತ್ತಿದ್ದ ಭಾರಿ ಪ್ರಮಾಣದ ತ್ಯಾಜ್ಯ ನದಿಯ ಕಿಂಡಿ ಅಣೆಕಟ್ಟಿನಲ್ಲಿ ಸಂಗ್ರಹಗೊಂಡಿರುವ ನೀರನ್ನು ಸೇರಿ, ನೀರು ಮಲೀನಗೊಳ್ಳುವ ಸಾಧ್ಯತೆ ಇದ್ದು, ಈ ಕುರಿತು ವಿಜಯ ಕರ್ನಾಟಕದಲ್ಲಿ ವರದಿ ಪ್ರಕಟವಾಗಿತ್ತು. ಕಲ್ಮಂಜ ಮತ್ತು ಮುಂಡಾಜೆ ಗ್ರಾಮ ಪಂಚಾಯಿತಿ ಗ್ರಾಮ ಸಭೆಗಳಲ್ಲಿ ಈ ವಿಚಾರ ಭಾರಿ ಚರ್ಚೆಗೂ ಕಾರಣವಾಗಿತ್ತು.

ಎರಡು ಗ್ರಾಮ ಪಂಚಾಯಿತಿಗಳ ವತಿಯಿಂದ ಮಂಗಳವಾರ ಇಲ್ಲಿ ಸ್ವಚ್ಛತೆ ಕಾರ್ಯ ನಡೆದ ಬಳಿಕ ಕಲ್ಮಂಜ ಗ್ರಾಮ ಪಂಚಾಯಿತಿ ವತಿಯಿಂದ ಸೇತುವೆಗಳ ವ್ಯಾಪ್ತಿಗೆ ಸಿಸಿಟಿವಿ ಅಳವಡಿಸಲಾಗಿದೆ. ಇದರ ಚಿತ್ರಣಗಳು ಪಂಚಾಯಿತಿ ಹಾಗೂ ಅಗತ್ಯ ಸಿಬ್ಬಂದಿಗೆ ರವಾನೆಯಾಗುತ್ತವೆ. ಇದು ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಲು ಮಾಡಿರುವ ವ್ಯವಸ್ಥೆಯಾಗಿದ್ದು, ನದಿಯಲ್ಲಿ ಸಂಗ್ರಹಗೊಂಡಿರುವ ನೀರನ್ನು ಕಲುಷಿತಗೊಳ್ಳದಂತೆ ಕಾಪಾಡುವುದು ಪಂಚಾಯಿತಿಯ ಕರ್ತವ್ಯವಾಗಿದೆ ಎಂದು ಕಲ್ಮಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ತಿಳಿಸಿದ್ದಾರೆ.

Related posts

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ಹಿರಿಯ ನಾಗರೀಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಪೀಢರ್ ಅಳವಡಿಸಿ, ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಆಗ್ರಹ

Suddi Udaya

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!