July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆ .28ರಂದು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜ ರಜಪೂತ್ ರವರು ನಿರ್ವಹಿಸಿ ರಾಷ್ಟ್ರೀಯ ವಿಜ್ಞಾನ ದಿನದ ಬಗ್ಗೆ ಮಾತನಾಡಿದರು ಮತ್ತು ಭಾರತೀಯ ವಿಜ್ಞಾನಿಗಳ ಸಾಧನೆಗಳನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕ ಜೋಸೆಫ್ ರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶ್ರೀಮತಿ ಉಷಾ ,ಶ್ರೀ ಶೇಖರ್ ಗೌಡ., ಶ್ರೀಮತಿ ಕಾವ್ಯ ಇವರು ಆಧುನಿಕ ಯುಗದಲ್ಲಿ ವಿಜ್ಞಾನದ ಮಹತ್ವ ಮತ್ತು ವಿಜ್ಞಾನ ದಿನಾಚರಣೆಯನ್ನು ಆಚರಿಸಬೇಕಾದಂತಹ ಅವಶ್ಯಕತೆಗಳ ಬಗ್ಗೆ ವಿವರಣೆಯನ್ನು ನೀಡಿದರು. 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳನ್ನು ತಾವೇ ತಯಾರಿಸಿ ಪ್ರದರ್ಶನದಲ್ಲಿ ಭಾಗವಹಿಸಿ ವಿವರಣೆಗಳನ್ನು ನೀಡಿದರು .

ಕಾರ್ಯಕ್ರಮವನ್ನು ಶಿಕ್ಷಕಿ ಕೇಶವತಿ ನಿರ್ವಹಿಸಿ, ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ , ಶಿಕ್ಷಕಿ ಪೂರ್ಣಿಮಾ ಕೆ. ಎಂ ವಂದಿಸಿದರು.

Related posts

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya
error: Content is protected !!