30.2 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

ಬೆಳ್ತಂಗಡಿ:ಅಭಿವೃದ್ಧಿ ಎಂದರೆ ಬರೀ ರಸ್ತೆ ನಿರ್ಮಾಣ, ಕಟ್ಟಡ ನಿರ್ಮಾಣ ಅಲ್ಲ.ವ್ಯಕ್ತಿಯೋರ್ವನ ಸಾಂಸ್ಕೃತಿಕ ಮನಸ್ಸು ಕಟ್ಟುವ ಕೆಲಸವು ಕೂಡ ಆಂತರಿಕ ಅಭಿವೃದ್ಧಿಯೇ. ಯುವ ಮನಸ್ಸುಗಳನ್ನು ಸಾಂಸ್ಕೃತಿಕವಾಗಿ ಕಟ್ಟದೆ ಹೋದಲ್ಲಿ ಭಾರತದ ನೈಜ ಸಾಂಸ್ಕೃತಿಕ ವಿಶ್ವರೂಪ ದರ್ಶನ ದೊರೆಯದ ಸಾಧ್ಯವಿಲ್ಲ. ಭಾರತೀಯ ಕಲಾ ಪ್ರಕಾರಗಳೆಲ್ಲವು ಸಾಮಾಜಿಕ ಮೌಲ್ಯಗಳ ಅಂತ್ಹಸತ್ವ ಅಧರಿಸಿದವುಗಳು. ಭಾರತೀಯ ಸಂಸ್ಕೃತಿಯ ನಾಟಕ ,ಯಕ್ಷಗಾನ, ಸಂಗೀತಗಳು ಮನೋರಂಜನಾ ಕಾರ್ಯಕ್ರಮಗಳಲ್ಲ. ಅದು ಕಲೆ ಸಂಸ್ಕೃತಿ, ಸಂಸ್ಕಾರ , ಆಚರಣೆ, ಆಚಾರ ವಿಚಾರಗಳ ಮನೋವಿಕಾಸದ ಒಟ್ಟು ಸಂಕಲನ.

ಈ ನೆಲದ ಮಣ್ಣಿನ ಜೀವಂತಿಕೆಯನ್ನು ,ಅದರ ಸಾರವನ್ನು,ಈ ದೇಶ ಪ್ರತಿಪಾದಿಸಿದ ಜೀವನ ಮೌಲ್ಯವನ್ನು ತಿಳಿಸುವ ಪ್ರಯತ್ನವೆ ಸಾಂಸ್ಕೃತಿಕ ಪ್ರತಿಷ್ಠಾನದ ಉದ್ದೇಶ ಆಗಿದೆ. ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಕಳೆದ 15 ವರ್ಷಗಳಿಂದ ಇದೇ ವಿಚಾರದಲ್ಲಿ ನಂಬಿಕೆಯಿಟ್ಟು ಬೆಳೆದಿದೆ. ಪಾಡ್ದನ, ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ಮೈಸೂರಿನ ರಂಗಾಯಣದಂತಹ ರಂಗ ಶಾಲೆಗಳನ್ನು ತೆರೆಯುವ ಆಲೋಚನೆಗಳಿವೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ತಿಳಿಸಿದರು. ಮಾಹಿತಿಗಾಗಿ ಅವರ ಪೋನ್ ನಂಬರ್ – 96633 73940

Related posts

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya
error: Content is protected !!