25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

ಬೆಳ್ತಂಗಡಿ:ಅಭಿವೃದ್ಧಿ ಎಂದರೆ ಬರೀ ರಸ್ತೆ ನಿರ್ಮಾಣ, ಕಟ್ಟಡ ನಿರ್ಮಾಣ ಅಲ್ಲ.ವ್ಯಕ್ತಿಯೋರ್ವನ ಸಾಂಸ್ಕೃತಿಕ ಮನಸ್ಸು ಕಟ್ಟುವ ಕೆಲಸವು ಕೂಡ ಆಂತರಿಕ ಅಭಿವೃದ್ಧಿಯೇ. ಯುವ ಮನಸ್ಸುಗಳನ್ನು ಸಾಂಸ್ಕೃತಿಕವಾಗಿ ಕಟ್ಟದೆ ಹೋದಲ್ಲಿ ಭಾರತದ ನೈಜ ಸಾಂಸ್ಕೃತಿಕ ವಿಶ್ವರೂಪ ದರ್ಶನ ದೊರೆಯದ ಸಾಧ್ಯವಿಲ್ಲ. ಭಾರತೀಯ ಕಲಾ ಪ್ರಕಾರಗಳೆಲ್ಲವು ಸಾಮಾಜಿಕ ಮೌಲ್ಯಗಳ ಅಂತ್ಹಸತ್ವ ಅಧರಿಸಿದವುಗಳು. ಭಾರತೀಯ ಸಂಸ್ಕೃತಿಯ ನಾಟಕ ,ಯಕ್ಷಗಾನ, ಸಂಗೀತಗಳು ಮನೋರಂಜನಾ ಕಾರ್ಯಕ್ರಮಗಳಲ್ಲ. ಅದು ಕಲೆ ಸಂಸ್ಕೃತಿ, ಸಂಸ್ಕಾರ , ಆಚರಣೆ, ಆಚಾರ ವಿಚಾರಗಳ ಮನೋವಿಕಾಸದ ಒಟ್ಟು ಸಂಕಲನ.

ಈ ನೆಲದ ಮಣ್ಣಿನ ಜೀವಂತಿಕೆಯನ್ನು ,ಅದರ ಸಾರವನ್ನು,ಈ ದೇಶ ಪ್ರತಿಪಾದಿಸಿದ ಜೀವನ ಮೌಲ್ಯವನ್ನು ತಿಳಿಸುವ ಪ್ರಯತ್ನವೆ ಸಾಂಸ್ಕೃತಿಕ ಪ್ರತಿಷ್ಠಾನದ ಉದ್ದೇಶ ಆಗಿದೆ. ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಕಳೆದ 15 ವರ್ಷಗಳಿಂದ ಇದೇ ವಿಚಾರದಲ್ಲಿ ನಂಬಿಕೆಯಿಟ್ಟು ಬೆಳೆದಿದೆ. ಪಾಡ್ದನ, ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ಮೈಸೂರಿನ ರಂಗಾಯಣದಂತಹ ರಂಗ ಶಾಲೆಗಳನ್ನು ತೆರೆಯುವ ಆಲೋಚನೆಗಳಿವೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ತಿಳಿಸಿದರು. ಮಾಹಿತಿಗಾಗಿ ಅವರ ಪೋನ್ ನಂಬರ್ – 96633 73940

Related posts

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!