March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

ಬೆಳ್ತಂಗಡಿ : ವಕೀಲರ ಸಂಘ (ರಿ ) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದ ಕಟ್ಟಡ ನಿರ್ಮಾಣಕ್ಕೆ ಮನವಿಯನ್ನು ಸಲ್ಲಿಸಲಾಯಿತು ಮತ್ತು ವಕೀಲರ ಭವನದ ಕಟ್ಟಡಕ್ಕೆ ಲಿಫ್ಟಿನ ವ್ಯವಸ್ಥೆಯನ್ನು ಮಾಡುವಂತೆ ಮನವಿಯನ್ನು ನೀಡಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ವಹಿಸಿದ್ದರು, ವೇದಿಕೆಯಲ್ಲಿ ಹಿರಿಯ ಸಮಿತಿಯ ಅಧ್ಯಕ್ಷರಾದ ಅಲೋಸಿಸ್ ಎಸ್ ಲೋಬೊ, ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ ಕೆ ಮತ್ತು ಉಪಾಧ್ಯಕ್ಷರಾದ ಅಶೋಕ ಕರಿಯನೆಲ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮನವಿಯನ್ನು ಹಿರಿಯ ವಕೀಲರಾದ ಬಿಕೆ ಧನಂಜಯ ರಾವ್ ರವರು ವಾಚಿಸಿದರು. ಸನ್ಮಾನ ಪತ್ರವನ್ನು ಅಲೋಸಿಯಸ್ ಎಸ್ ಲೋಬೋ ರವರು ವಾಚಿಸಿದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ, ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ಕಿರಿಯ ವಕೀಲರಗಳು, ಗಣ್ಯರು ಹಾಗೂ ಪತ್ರಿಕಾ ಮಾಧ್ಯಮದವರು ಉಪಸ್ಥಿರಿದ್ದರು.

ಕಾರ್ಯಕ್ರಮ ನಿರೂಪಣೆಯನ್ನು ವಕೀಲರಾದ ಸೇವಿಯರ್ ಪಾಲೆಲಿ ಹಾಗೂ ಧನ್ಯವಾದವನ್ನು ಅಸ್ಮ ನೆರವೇರಿಸಿದರು.

Related posts

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya
error: Content is protected !!