21.5 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

ಬೆಳ್ತಂಗಡಿ : ವಕೀಲರ ಸಂಘ (ರಿ ) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದ ಕಟ್ಟಡ ನಿರ್ಮಾಣಕ್ಕೆ ಮನವಿಯನ್ನು ಸಲ್ಲಿಸಲಾಯಿತು ಮತ್ತು ವಕೀಲರ ಭವನದ ಕಟ್ಟಡಕ್ಕೆ ಲಿಫ್ಟಿನ ವ್ಯವಸ್ಥೆಯನ್ನು ಮಾಡುವಂತೆ ಮನವಿಯನ್ನು ನೀಡಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ವಹಿಸಿದ್ದರು, ವೇದಿಕೆಯಲ್ಲಿ ಹಿರಿಯ ಸಮಿತಿಯ ಅಧ್ಯಕ್ಷರಾದ ಅಲೋಸಿಸ್ ಎಸ್ ಲೋಬೊ, ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ ಕೆ ಮತ್ತು ಉಪಾಧ್ಯಕ್ಷರಾದ ಅಶೋಕ ಕರಿಯನೆಲ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮನವಿಯನ್ನು ಹಿರಿಯ ವಕೀಲರಾದ ಬಿಕೆ ಧನಂಜಯ ರಾವ್ ರವರು ವಾಚಿಸಿದರು. ಸನ್ಮಾನ ಪತ್ರವನ್ನು ಅಲೋಸಿಯಸ್ ಎಸ್ ಲೋಬೋ ರವರು ವಾಚಿಸಿದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ, ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ಕಿರಿಯ ವಕೀಲರಗಳು, ಗಣ್ಯರು ಹಾಗೂ ಪತ್ರಿಕಾ ಮಾಧ್ಯಮದವರು ಉಪಸ್ಥಿರಿದ್ದರು.

ಕಾರ್ಯಕ್ರಮ ನಿರೂಪಣೆಯನ್ನು ವಕೀಲರಾದ ಸೇವಿಯರ್ ಪಾಲೆಲಿ ಹಾಗೂ ಧನ್ಯವಾದವನ್ನು ಅಸ್ಮ ನೆರವೇರಿಸಿದರು.

Related posts

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!