23.6 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

ಬೆಳ್ತಂಗಡಿ : ವಕೀಲರ ಸಂಘ (ರಿ ) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದ ಕಟ್ಟಡ ನಿರ್ಮಾಣಕ್ಕೆ ಮನವಿಯನ್ನು ಸಲ್ಲಿಸಲಾಯಿತು ಮತ್ತು ವಕೀಲರ ಭವನದ ಕಟ್ಟಡಕ್ಕೆ ಲಿಫ್ಟಿನ ವ್ಯವಸ್ಥೆಯನ್ನು ಮಾಡುವಂತೆ ಮನವಿಯನ್ನು ನೀಡಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ವಹಿಸಿದ್ದರು, ವೇದಿಕೆಯಲ್ಲಿ ಹಿರಿಯ ಸಮಿತಿಯ ಅಧ್ಯಕ್ಷರಾದ ಅಲೋಸಿಸ್ ಎಸ್ ಲೋಬೊ, ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ ಕೆ ಮತ್ತು ಉಪಾಧ್ಯಕ್ಷರಾದ ಅಶೋಕ ಕರಿಯನೆಲ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮನವಿಯನ್ನು ಹಿರಿಯ ವಕೀಲರಾದ ಬಿಕೆ ಧನಂಜಯ ರಾವ್ ರವರು ವಾಚಿಸಿದರು. ಸನ್ಮಾನ ಪತ್ರವನ್ನು ಅಲೋಸಿಯಸ್ ಎಸ್ ಲೋಬೋ ರವರು ವಾಚಿಸಿದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ, ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ಕಿರಿಯ ವಕೀಲರಗಳು, ಗಣ್ಯರು ಹಾಗೂ ಪತ್ರಿಕಾ ಮಾಧ್ಯಮದವರು ಉಪಸ್ಥಿರಿದ್ದರು.

ಕಾರ್ಯಕ್ರಮ ನಿರೂಪಣೆಯನ್ನು ವಕೀಲರಾದ ಸೇವಿಯರ್ ಪಾಲೆಲಿ ಹಾಗೂ ಧನ್ಯವಾದವನ್ನು ಅಸ್ಮ ನೆರವೇರಿಸಿದರು.

Related posts

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

Suddi Udaya
error: Content is protected !!