23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

ಬೆಳ್ತಂಗಡಿ: ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ‌ ಜ. 8 ರಿಂದ 12 ರವರೆಗೆ ನಡೆದ ಅಷ್ಟಬಂಧ ಬ್ರಹ್ಮಕಲಶೋತ್ಸವವು ಅರುವ ಬ್ರಹ್ಮಕಲಶೋತ್ಸವವೆಂದೇ ಜಿಲ್ಲಾದ್ಯಂತ ಪ್ರಸಿದ್ದಿ ಪಡೆದಿರುವುದಲ್ಲದೆ ಮಾದರಿಯೂ ಆಗಿರುವುದು ಸಂತಸ ತಂದಿದೆ. ಇದಕ್ಕೆಲ್ಲಾ ಅಜಿಲ ಸೀಮೆಯ ಭಕ್ತರು ಕಾರಣ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಅಳದಂಗಡಿ ಅರಮನೆ ಡಾl ಪದ್ಮಪ್ರಸಾದ ಅಜಿಲರು ಶ್ಲಾಘಿಸಿದರು.

ಅವರು ಫೆ.28 ರಂದು ದೇವಿ ಸನ್ನಿಧಿಯಲ್ಲಿ ನಡೆದ ಧೃಡ ಕಲಶ ಸಂದರ್ಭ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.


ಅಲ್ಪ ಸಮಯದ ಅವಧಿಯಲ್ಲಿ ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆದಿರುವುದಕ್ಕೆ ಸ್ಥಳೀಯ ಸಂಘ ಸಂಸ್ಥೆಗಳ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ, ವಿವಿಧ ತರಕಾರಿ ಇಲಾಖೆಗಳ, ದಾನಿಗಳ ಸಹಕಾರವೇ ಕಾರಣ ಎಂದು ಅವರು ಅಭಿನಂದಿಸಿದರು.


5 ದಿನಗಳ ಬ್ರಹ್ಮಕಲಶೋತ್ಸವದ ಅವಧಿಯಲ್ಲಿ ಸುಮಾರು 60,000 ಕ್ಕೂ ಮೇಲ್ಪಟ್ಟು ಭಕ್ತರು ಅನ್ನಪ್ರಸಾದವನ್ನು ಸ್ವೀಕರಿಸಿರುವುದು ಕ್ಷೇತ್ರದ ಮಹಿಮೆಯನ್ನು ಹೆಚ್ಚಿಸಿದೆ ಎಂದರು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ವೇದಿಕೆಯಲ್ಲಿದ್ದರು.


ಸಮಿತಿ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಖರ್ಚು- ವೆಚ್ಚಗಳ ಮಾಹಿತಿಯನ್ನು ವಿಸ್ತಾರವಾಗಿ ನೀಡಿದರು. ಸಂಚಾಲಕ ಶಿವಪ್ರಸಾದ ಅಜಿಲ ಸ್ವಾಗತಿಸಿದರು. ವೇದ ಮೂರ್ತಿ ನಡ್ವಂತಾಡಿ ಶ್ರೀಪಾದ ಪಾಂಗಾಣ್ಣಾಯ ಹಾಗೂ ಅರ್ಚಕ ಪ್ರಕಾಶ ಹೊಳ್ಳ ಅವರು ವಾಸ್ತು ಪೂಜೆ, ಕಲಶಾಭಿಷೇಕ ಇತ್ಯಾದಿ ವಿಧಾನಗಳನ್ನು ನೆರವೇರಿಸಿದರು.

Related posts

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

Suddi Udaya
error: Content is protected !!