23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೆ ಏರಿದ್ದು ಅಭಿವೃದ್ಧಿ ಹೊಂದಲಿರುವ ಉಜಿರೆ- ಪೆರಿಯಶಾಂತಿ ನಡುವಿನ ರಸ್ತೆಯ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಮೀಸಲಿರಿಸಿದ್ದು ಇದರ ಒಂದೊಂದೇ ಹಂತದ ಸಮೀಕ್ಷೆಗಳು ನಡೆಯುತ್ತಿದ್ದು, ಉಜಿರೆಯಿಂದ ಧರ್ಮಸ್ಥಳ ತನಕ ರಸ್ತೆ ಅಭಿವೃದ್ಧಿಗೆ ತೆರವುಗೊಳ್ಳಲಿರುವ ಖಾಸಗಿ ಜಾಗಗಳಲ್ಲಿರುವ ಮರಗಳ ಸಮೀಕ್ಷೆ ನಡೆಯುತ್ತಿದೆ.
ಕೆಲವೆಡೆ ಚತುಷ್ಪಥ, ಕೆಲವೆಡೆ ದ್ವಿಪಥವಾಗಿ ನಿರ್ಮಾಣಗೊಳ್ಳಲಿರುವ ಈ ರಸ್ತೆಯ ಅಭಿವೃದ್ಧಿ ವೇಳೆ ಹಲವು ಮರಗಳು ತೆರವುಗೊಳ್ಳಬೇಕಿದೆ. ಇದರ ಪ್ರಥಮ ಅಂಗವಾಗಿ ಖಾಸಗಿ ಜಾಗದಲ್ಲಿರುವ ಮರಗಳನ್ನು ಗುರುತಿಸಲಾಗುತ್ತಿದೆ. ತೆರವುಗೊಳ್ಳುವ ಪ್ರತಿ ಮರಕ್ಕೆ ಮೌಲ್ಯ ನಿಗದಿಪಡಿಸಿ‌ಕಟಾವಿನ ವೇಳೆ ಸ್ಥಳದ ಮಾಲೀಕರಿಗೆ ನೀಡಲಾಗುತ್ತದೆ.

ಸಮೀಕ್ಷೆ ಕಾರ್ಯದಲ್ಲಿ ಭೂಸ್ವಾಧೀನ ಅಧಿಕಾರಿ ಕಚೇರಿಯ ಆರ್ ಐ ನವೀನ್ ಕುಮಾರ್, ಸರ್ವೆಯರ್ ಕೃಷ್ಣಪ್ರಸಾದ್,ಬೆಳ್ತಂಗಡಿ ಅರಣ್ಯ ವಲಯದ ಡಿಆರ್ ಎಫ್ ಒ ರವಿಚಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!