July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೆ ಏರಿದ್ದು ಅಭಿವೃದ್ಧಿ ಹೊಂದಲಿರುವ ಉಜಿರೆ- ಪೆರಿಯಶಾಂತಿ ನಡುವಿನ ರಸ್ತೆಯ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಮೀಸಲಿರಿಸಿದ್ದು ಇದರ ಒಂದೊಂದೇ ಹಂತದ ಸಮೀಕ್ಷೆಗಳು ನಡೆಯುತ್ತಿದ್ದು, ಉಜಿರೆಯಿಂದ ಧರ್ಮಸ್ಥಳ ತನಕ ರಸ್ತೆ ಅಭಿವೃದ್ಧಿಗೆ ತೆರವುಗೊಳ್ಳಲಿರುವ ಖಾಸಗಿ ಜಾಗಗಳಲ್ಲಿರುವ ಮರಗಳ ಸಮೀಕ್ಷೆ ನಡೆಯುತ್ತಿದೆ.
ಕೆಲವೆಡೆ ಚತುಷ್ಪಥ, ಕೆಲವೆಡೆ ದ್ವಿಪಥವಾಗಿ ನಿರ್ಮಾಣಗೊಳ್ಳಲಿರುವ ಈ ರಸ್ತೆಯ ಅಭಿವೃದ್ಧಿ ವೇಳೆ ಹಲವು ಮರಗಳು ತೆರವುಗೊಳ್ಳಬೇಕಿದೆ. ಇದರ ಪ್ರಥಮ ಅಂಗವಾಗಿ ಖಾಸಗಿ ಜಾಗದಲ್ಲಿರುವ ಮರಗಳನ್ನು ಗುರುತಿಸಲಾಗುತ್ತಿದೆ. ತೆರವುಗೊಳ್ಳುವ ಪ್ರತಿ ಮರಕ್ಕೆ ಮೌಲ್ಯ ನಿಗದಿಪಡಿಸಿ‌ಕಟಾವಿನ ವೇಳೆ ಸ್ಥಳದ ಮಾಲೀಕರಿಗೆ ನೀಡಲಾಗುತ್ತದೆ.

ಸಮೀಕ್ಷೆ ಕಾರ್ಯದಲ್ಲಿ ಭೂಸ್ವಾಧೀನ ಅಧಿಕಾರಿ ಕಚೇರಿಯ ಆರ್ ಐ ನವೀನ್ ಕುಮಾರ್, ಸರ್ವೆಯರ್ ಕೃಷ್ಣಪ್ರಸಾದ್,ಬೆಳ್ತಂಗಡಿ ಅರಣ್ಯ ವಲಯದ ಡಿಆರ್ ಎಫ್ ಒ ರವಿಚಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ಶಿಶಿಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ

Suddi Udaya

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya

ನಾಳೆ( ಮೇ 20): ದೇಶಾದ್ಯಂತ  ಮೆಡಿಕಲ್ ಶಾಪ್‌ಗಳು ಬಂದ್

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಮೇ 17: ಪೇರಾಲ್ದಪಲ್ಕೆ ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ಇದರ ವಾರ್ಷಿಕ ಪರ್ವ ಮತ್ತು ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya
error: Content is protected !!