22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

ಬೆಳ್ತಂಗಡಿ: ಬೆಂಗಳೂರಿನ ಜೈನ್ ಯುನಿವರ್ಸಿಟಿ ಯಲ್ಲಿ ನಡೆದ ರಾಷ್ಟ್ರ ಮಟ್ಟದ ನಾಟಕ ಸ್ಪರ್ಧೆ ಅಭಿನಯದಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜಿನ ಭೀಷ್ಮಾಸ್ತಮಾನ ನಾಟಕ ಪ್ರಥಮ ಸ್ಥಾನ ಗಳಿಸಿದೆ.

ಸ್ಪರ್ಧೆಯು ಎರಡು ಹಂತದಲ್ಲಿ ನಡೆದಿದ್ದು, ಮೊದಲ ಸುತ್ತಿನಲ್ಲಿ 25 ಕ್ಕೂ ಅಧಿಕ ತಂಡಗಳು ಭಾಗವಹಿಸಿ, 6 ತಂಡಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು.

ಭೀಷ್ಮಾಸ್ತಮಾನವು ಅತ್ಯುತ್ತಮ ನಾಟಕ ಪ್ರಶಸ್ತಿಯ ಜತೆಗೆ 9 ವೈಯಕ್ತಿಕ ಪ್ರಶಸ್ತಿಗಳ ಪೈಕಿ 6ನ್ನು ಗೆದ್ದುಕೊಂಡಿದೆ. ರಂಗ ನಿರ್ದೇಶಕ ಯಶವಂತ್ ಬೆಳ್ತಂಗಡಿ (ಅತ್ಯುತ್ತಮ ನಿರ್ದೇಶನ), ಶ್ರೀಕೃಷ್ಣ ಪಾತ್ರಧಾರಿ ಅಮಿತ್ ಕುಮಾರ್ (ಅತ್ಯುತ್ತಮ ನಟ), ಅರ್ಜುನ ಪಾತ್ರಧಾರಿ ಅಮೃತವರ್ಷಿಣಿ (ಅತ್ಯುತ್ತಮ ನಟಿ), ಮದನ್ ಮತ್ತು ಸುಬ್ರಹ್ಮಣ್ಯ ತಂಡ (ಅತ್ಯುತ್ತಮ ಸಂಗೀತ), ಅಶ್ವಿತ್ ಮತ್ತು ಆಯುಷ್ಮಾನ್ (ಅತ್ಯುತ್ತಮ ಬೆಳಕಿನ ವಿನ್ಯಾಸ) ಪ್ರಶಸ್ತಿ ಪಡೆದಿದ್ದು, ಅತ್ಯುತ್ತಮ ರಂಗಸಜ್ಜಿಕೆ ಪ್ರಶಸ್ತಿಯನ್ನೂ ಗೆದ್ದುಕೊಂಡಿದೆ.

ವ್ಯಾಸ ವಿರಚಿತ ಮಹಾಭಾರತ, ಕುಮಾರವ್ಯಾಸ ಭಾರತ, ಭಗವದ್ಗೀತೆ ಹಾಗೂ ಇತರ ಕೆಲವು ಪೌರಾಣಿಕ ಆಕರಗಳಿಂದ ಪ್ರೇರಿತಗೊಂಡಿರುವ, ಎಸ್ ಡಿಎಂ ಕಲಾ ಕೇಂದ್ರ ಪ್ರಸ್ತುತಪಡಿಸಿದ ಈ ನಾಟಕವನ್ನು ಕಾಲೇಜಿನ ಹಿರಿಯ ವಿದ್ಯಾರ್ಥಿ ಸ್ಕಂದ ಭಾರ್ಗವ ರಚಿಸಿದ್ದು, ಕೇಂದ್ರದ ರಂಗ ನಿರ್ದೇಶಕ ಯಶವಂತ್ ಬೆಳ್ತಂಗಡಿ (ನೀನಾಸಂ) ನಿರ್ದೇಶಿಸಿದ್ದಾರೆ. ಅಂತಿಮ ಪದವಿ ವಿದ್ಯಾರ್ಥಿಗಳಾದ ಮದನ್ ಎಂ. ಸಂಗೀತ ನೀಡಿದ್ದು, ಸುಬ್ರಹ್ಮಣ್ಯ ಜಿ. ಭಟ್ ಪಕ್ಕವಾದ್ಯದಲ್ಲಿ ಮತ್ತು ಗೌರವಿ ಹಿನ್ನೆಲೆ ಸಂಗೀತದಲ್ಲಿ ಸಾಥ್ ನೀಡಿದ್ದರು.

(ಧೃತರಾಷ್ಟ್ರ), ದ್ವಿತೀಯ ಎಂಎಸ್ಸಿ ವಿದ್ಯಾರ್ಥಿನಿ ಸೋನಾಕ್ಷಿ (ಶಿಖಂಡಿ), ತೃತೀ ಯ ಪದವಿ ವಿದ್ಯಾರ್ಥಿಗಳಾದ ರಾಜೇಶ್ (ಭೀಷ್ಮ), ಸುಜಿತ್ (ಸಂಜಯ), ಹರ್ಷ (ಧರ್ಮರಾಯ), ಉಲ್ಲೇಖ (ಬ್ರೌಪದಿ), ದ್ವಿತೀಯ ಪದವಿ ವಿದ್ಯಾರ್ಥಿಗಳಾದ ಜ್ಯೋತಿಕ (ಸೂತ್ರಧಾರ), ನೂತನ್ (ಎಷ್ಟು), ಭೂಷಣ್ (ಭೀಮಸೇನ) ಹಾಗೂ ಕನ್ನಿಕಾ ಎಸ್. (ಗಾಂಧಾರಿ) ಮತ್ತು (ಗಂಗೆ) ಪ್ರಮುಖ ಪಾತ್ರಗಳಿಗೆ ಜೀವ ತುಂಬಿದರು. ಮೇಳದಲ್ಲಿ ದ್ವಿತೀಯ ಪದವಿ ಯ ಮಾಧವ್, ವೈಶಾಖ್, ಆದಿತ್ಯ, ಅಕ್ಷರಿ ಮತ್ತು ಕನಿಷ್ಠಾ ಪಾತ್ರ ನಿರ್ವಹಿಸಿದರು.

Related posts

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya
error: Content is protected !!