July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ : ಇಲ್ಲಿಯ ಮುರ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದ ವತಿಯಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಮಾ.1 ರಂದು ಸಂಜೆ ಗಂಟೆ 5-30ಕ್ಕೆ ನೇರೋಳ್‌ಪಲ್ಕೆ ಅಂಗನವಾಡಿ ವಠಾರದಲ್ಲಿ ನಡೆಯಲಿದೆ.

ಸಂಜೆ 5-30ಕ್ಕೆ ಶ್ರೀ ಶನೀಶ್ವರ ಪೂಜೆ ಪ್ರಾರಂಭ, ರಾತ್ರಿ ಗಂಟೆ 7-00ಕ್ಕೆ ಮಹಾಪೂಜೆ ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ತಂಡಗಳಿಂದ ಕುಣಿತ ಭಜನೆ, (ಸಂದೇಶ್‌ ಮದ್ದಡ್ಕ ಇವರ ನೇತೃತ್ವದಲ್ಲಿ) ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಭಜನಾ ಕಾರ್ಯಕ್ರಮ ಉದ್ಘಾಟನೆಯನ್ನು ಬೆಳ್ತಂಗಡಿ ನೋಟರಿ ವಕೀಲರು ಶಶಿಕರಣ್ ಜೈನ್ , ಸಭಾ ಅಧ್ಯಕ್ಷತೆಯನ್ನು ವಿಶ್ವನಾಥ ಚೆನ್ನಳಿಕೆ ವಹಿಸಲಿದ್ದಾರೆ. ಕಿರಣ್‌ಚಂದ್ರ ಡಿ. ಪುಷ್ಪಗಿರಿ, ಯುವ ಉದ್ಯಮಿ, ಬೆಂಗಳೂರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ರಾತ್ರಿ ಗಂಟೆ 9-30ರಿಂದ ಫಾಲ್ಕಾನ್ಸ್ ನೃತ್ಯ ತಂಡ ಬಿಜೈ ಮಂಗಳೂರು ಇವರಿಂದ ನೂತನ ನೃತ್ಯ ಪ್ರಕಾರಗಳ ಅನಾವರಣ ನಡೆಯಲಿದೆ.

Related posts

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

Suddi Udaya

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya
error: Content is protected !!