23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ : ಇಲ್ಲಿಯ ಮುರ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದ ವತಿಯಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಮಾ.1 ರಂದು ಸಂಜೆ ಗಂಟೆ 5-30ಕ್ಕೆ ನೇರೋಳ್‌ಪಲ್ಕೆ ಅಂಗನವಾಡಿ ವಠಾರದಲ್ಲಿ ನಡೆಯಲಿದೆ.

ಸಂಜೆ 5-30ಕ್ಕೆ ಶ್ರೀ ಶನೀಶ್ವರ ಪೂಜೆ ಪ್ರಾರಂಭ, ರಾತ್ರಿ ಗಂಟೆ 7-00ಕ್ಕೆ ಮಹಾಪೂಜೆ ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ತಂಡಗಳಿಂದ ಕುಣಿತ ಭಜನೆ, (ಸಂದೇಶ್‌ ಮದ್ದಡ್ಕ ಇವರ ನೇತೃತ್ವದಲ್ಲಿ) ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಭಜನಾ ಕಾರ್ಯಕ್ರಮ ಉದ್ಘಾಟನೆಯನ್ನು ಬೆಳ್ತಂಗಡಿ ನೋಟರಿ ವಕೀಲರು ಶಶಿಕರಣ್ ಜೈನ್ , ಸಭಾ ಅಧ್ಯಕ್ಷತೆಯನ್ನು ವಿಶ್ವನಾಥ ಚೆನ್ನಳಿಕೆ ವಹಿಸಲಿದ್ದಾರೆ. ಕಿರಣ್‌ಚಂದ್ರ ಡಿ. ಪುಷ್ಪಗಿರಿ, ಯುವ ಉದ್ಯಮಿ, ಬೆಂಗಳೂರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ರಾತ್ರಿ ಗಂಟೆ 9-30ರಿಂದ ಫಾಲ್ಕಾನ್ಸ್ ನೃತ್ಯ ತಂಡ ಬಿಜೈ ಮಂಗಳೂರು ಇವರಿಂದ ನೂತನ ನೃತ್ಯ ಪ್ರಕಾರಗಳ ಅನಾವರಣ ನಡೆಯಲಿದೆ.

Related posts

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya
error: Content is protected !!