37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

ಬೆಳ್ತಂಗಡಿ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಮತ್ತು ಕಲ್ಮಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇತ್ರಾವತಿ ನದಿಯ ನಿಡಿಗಲ್ ಸೇತುವೆಗಳಿಗೆ ಕಲ್ಮಂಜ ಗ್ರಾಮ ಪಂಚಾಯಿತಿ ವತಿಯಿಂದ ಸಿಸಿಟಿವಿ ಅಳವಡಿಸಲಾಗಿದೆ.

ಇಲ್ಲಿನ ಸೇತುವೆಗಳಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ತಂದು ಸುರಿಯುತ್ತಿದ್ದ ಭಾರಿ ಪ್ರಮಾಣದ ತ್ಯಾಜ್ಯ ನದಿಯ ಕಿಂಡಿ ಅಣೆಕಟ್ಟಿನಲ್ಲಿ ಸಂಗ್ರಹಗೊಂಡಿರುವ ನೀರನ್ನು ಸೇರಿ, ನೀರು ಮಲೀನಗೊಳ್ಳುವ ಸಾಧ್ಯತೆ ಇದ್ದು, ಈ ಕುರಿತು ವಿಜಯ ಕರ್ನಾಟಕದಲ್ಲಿ ವರದಿ ಪ್ರಕಟವಾಗಿತ್ತು. ಕಲ್ಮಂಜ ಮತ್ತು ಮುಂಡಾಜೆ ಗ್ರಾಮ ಪಂಚಾಯಿತಿ ಗ್ರಾಮ ಸಭೆಗಳಲ್ಲಿ ಈ ವಿಚಾರ ಭಾರಿ ಚರ್ಚೆಗೂ ಕಾರಣವಾಗಿತ್ತು.

ಎರಡು ಗ್ರಾಮ ಪಂಚಾಯಿತಿಗಳ ವತಿಯಿಂದ ಮಂಗಳವಾರ ಇಲ್ಲಿ ಸ್ವಚ್ಛತೆ ಕಾರ್ಯ ನಡೆದ ಬಳಿಕ ಕಲ್ಮಂಜ ಗ್ರಾಮ ಪಂಚಾಯಿತಿ ವತಿಯಿಂದ ಸೇತುವೆಗಳ ವ್ಯಾಪ್ತಿಗೆ ಸಿಸಿಟಿವಿ ಅಳವಡಿಸಲಾಗಿದೆ. ಇದರ ಚಿತ್ರಣಗಳು ಪಂಚಾಯಿತಿ ಹಾಗೂ ಅಗತ್ಯ ಸಿಬ್ಬಂದಿಗೆ ರವಾನೆಯಾಗುತ್ತವೆ. ಇದು ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಲು ಮಾಡಿರುವ ವ್ಯವಸ್ಥೆಯಾಗಿದ್ದು, ನದಿಯಲ್ಲಿ ಸಂಗ್ರಹಗೊಂಡಿರುವ ನೀರನ್ನು ಕಲುಷಿತಗೊಳ್ಳದಂತೆ ಕಾಪಾಡುವುದು ಪಂಚಾಯಿತಿಯ ಕರ್ತವ್ಯವಾಗಿದೆ ಎಂದು ಕಲ್ಮಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

Suddi Udaya

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya
error: Content is protected !!