32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

ಬೆಳ್ತಂಗಡಿ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಮತ್ತು ಕಲ್ಮಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇತ್ರಾವತಿ ನದಿಯ ನಿಡಿಗಲ್ ಸೇತುವೆಗಳಿಗೆ ಕಲ್ಮಂಜ ಗ್ರಾಮ ಪಂಚಾಯಿತಿ ವತಿಯಿಂದ ಸಿಸಿಟಿವಿ ಅಳವಡಿಸಲಾಗಿದೆ.

ಇಲ್ಲಿನ ಸೇತುವೆಗಳಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ತಂದು ಸುರಿಯುತ್ತಿದ್ದ ಭಾರಿ ಪ್ರಮಾಣದ ತ್ಯಾಜ್ಯ ನದಿಯ ಕಿಂಡಿ ಅಣೆಕಟ್ಟಿನಲ್ಲಿ ಸಂಗ್ರಹಗೊಂಡಿರುವ ನೀರನ್ನು ಸೇರಿ, ನೀರು ಮಲೀನಗೊಳ್ಳುವ ಸಾಧ್ಯತೆ ಇದ್ದು, ಈ ಕುರಿತು ವಿಜಯ ಕರ್ನಾಟಕದಲ್ಲಿ ವರದಿ ಪ್ರಕಟವಾಗಿತ್ತು. ಕಲ್ಮಂಜ ಮತ್ತು ಮುಂಡಾಜೆ ಗ್ರಾಮ ಪಂಚಾಯಿತಿ ಗ್ರಾಮ ಸಭೆಗಳಲ್ಲಿ ಈ ವಿಚಾರ ಭಾರಿ ಚರ್ಚೆಗೂ ಕಾರಣವಾಗಿತ್ತು.

ಎರಡು ಗ್ರಾಮ ಪಂಚಾಯಿತಿಗಳ ವತಿಯಿಂದ ಮಂಗಳವಾರ ಇಲ್ಲಿ ಸ್ವಚ್ಛತೆ ಕಾರ್ಯ ನಡೆದ ಬಳಿಕ ಕಲ್ಮಂಜ ಗ್ರಾಮ ಪಂಚಾಯಿತಿ ವತಿಯಿಂದ ಸೇತುವೆಗಳ ವ್ಯಾಪ್ತಿಗೆ ಸಿಸಿಟಿವಿ ಅಳವಡಿಸಲಾಗಿದೆ. ಇದರ ಚಿತ್ರಣಗಳು ಪಂಚಾಯಿತಿ ಹಾಗೂ ಅಗತ್ಯ ಸಿಬ್ಬಂದಿಗೆ ರವಾನೆಯಾಗುತ್ತವೆ. ಇದು ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಲು ಮಾಡಿರುವ ವ್ಯವಸ್ಥೆಯಾಗಿದ್ದು, ನದಿಯಲ್ಲಿ ಸಂಗ್ರಹಗೊಂಡಿರುವ ನೀರನ್ನು ಕಲುಷಿತಗೊಳ್ಳದಂತೆ ಕಾಪಾಡುವುದು ಪಂಚಾಯಿತಿಯ ಕರ್ತವ್ಯವಾಗಿದೆ ಎಂದು ಕಲ್ಮಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ತಿಳಿಸಿದ್ದಾರೆ.

Related posts

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya

ಧರ್ಮಸ್ಥಳ : ಪೊಸೋಳಿಕೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya
error: Content is protected !!