22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

ಬೆಳ್ತಂಗಡಿ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಮತ್ತು ಕಲ್ಮಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇತ್ರಾವತಿ ನದಿಯ ನಿಡಿಗಲ್ ಸೇತುವೆಗಳಿಗೆ ಕಲ್ಮಂಜ ಗ್ರಾಮ ಪಂಚಾಯಿತಿ ವತಿಯಿಂದ ಸಿಸಿಟಿವಿ ಅಳವಡಿಸಲಾಗಿದೆ.

ಇಲ್ಲಿನ ಸೇತುವೆಗಳಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ತಂದು ಸುರಿಯುತ್ತಿದ್ದ ಭಾರಿ ಪ್ರಮಾಣದ ತ್ಯಾಜ್ಯ ನದಿಯ ಕಿಂಡಿ ಅಣೆಕಟ್ಟಿನಲ್ಲಿ ಸಂಗ್ರಹಗೊಂಡಿರುವ ನೀರನ್ನು ಸೇರಿ, ನೀರು ಮಲೀನಗೊಳ್ಳುವ ಸಾಧ್ಯತೆ ಇದ್ದು, ಈ ಕುರಿತು ವಿಜಯ ಕರ್ನಾಟಕದಲ್ಲಿ ವರದಿ ಪ್ರಕಟವಾಗಿತ್ತು. ಕಲ್ಮಂಜ ಮತ್ತು ಮುಂಡಾಜೆ ಗ್ರಾಮ ಪಂಚಾಯಿತಿ ಗ್ರಾಮ ಸಭೆಗಳಲ್ಲಿ ಈ ವಿಚಾರ ಭಾರಿ ಚರ್ಚೆಗೂ ಕಾರಣವಾಗಿತ್ತು.

ಎರಡು ಗ್ರಾಮ ಪಂಚಾಯಿತಿಗಳ ವತಿಯಿಂದ ಮಂಗಳವಾರ ಇಲ್ಲಿ ಸ್ವಚ್ಛತೆ ಕಾರ್ಯ ನಡೆದ ಬಳಿಕ ಕಲ್ಮಂಜ ಗ್ರಾಮ ಪಂಚಾಯಿತಿ ವತಿಯಿಂದ ಸೇತುವೆಗಳ ವ್ಯಾಪ್ತಿಗೆ ಸಿಸಿಟಿವಿ ಅಳವಡಿಸಲಾಗಿದೆ. ಇದರ ಚಿತ್ರಣಗಳು ಪಂಚಾಯಿತಿ ಹಾಗೂ ಅಗತ್ಯ ಸಿಬ್ಬಂದಿಗೆ ರವಾನೆಯಾಗುತ್ತವೆ. ಇದು ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಲು ಮಾಡಿರುವ ವ್ಯವಸ್ಥೆಯಾಗಿದ್ದು, ನದಿಯಲ್ಲಿ ಸಂಗ್ರಹಗೊಂಡಿರುವ ನೀರನ್ನು ಕಲುಷಿತಗೊಳ್ಳದಂತೆ ಕಾಪಾಡುವುದು ಪಂಚಾಯಿತಿಯ ಕರ್ತವ್ಯವಾಗಿದೆ ಎಂದು ಕಲ್ಮಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ತಿಳಿಸಿದ್ದಾರೆ.

Related posts

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ವೇಣೂರು: ತುಂಗಮ್ಮ ಪೂಜಾರಿ ನಿಧನ

Suddi Udaya

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

Suddi Udaya
error: Content is protected !!