22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆ .28ರಂದು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜ ರಜಪೂತ್ ರವರು ನಿರ್ವಹಿಸಿ ರಾಷ್ಟ್ರೀಯ ವಿಜ್ಞಾನ ದಿನದ ಬಗ್ಗೆ ಮಾತನಾಡಿದರು ಮತ್ತು ಭಾರತೀಯ ವಿಜ್ಞಾನಿಗಳ ಸಾಧನೆಗಳನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕ ಜೋಸೆಫ್ ರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶ್ರೀಮತಿ ಉಷಾ ,ಶ್ರೀ ಶೇಖರ್ ಗೌಡ., ಶ್ರೀಮತಿ ಕಾವ್ಯ ಇವರು ಆಧುನಿಕ ಯುಗದಲ್ಲಿ ವಿಜ್ಞಾನದ ಮಹತ್ವ ಮತ್ತು ವಿಜ್ಞಾನ ದಿನಾಚರಣೆಯನ್ನು ಆಚರಿಸಬೇಕಾದಂತಹ ಅವಶ್ಯಕತೆಗಳ ಬಗ್ಗೆ ವಿವರಣೆಯನ್ನು ನೀಡಿದರು. 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳನ್ನು ತಾವೇ ತಯಾರಿಸಿ ಪ್ರದರ್ಶನದಲ್ಲಿ ಭಾಗವಹಿಸಿ ವಿವರಣೆಗಳನ್ನು ನೀಡಿದರು .

ಕಾರ್ಯಕ್ರಮವನ್ನು ಶಿಕ್ಷಕಿ ಕೇಶವತಿ ನಿರ್ವಹಿಸಿ, ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ , ಶಿಕ್ಷಕಿ ಪೂರ್ಣಿಮಾ ಕೆ. ಎಂ ವಂದಿಸಿದರು.

Related posts

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ನ ನೂತನ ಲಾಂಛನ ಬಿಡುಗಡೆ

Suddi Udaya

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya
error: Content is protected !!