35.9 C
ಪುತ್ತೂರು, ಬೆಳ್ತಂಗಡಿ
February 28, 2025
Uncategorized

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

ಬೆಳ್ತಂಗಡಿ:ಅಭಿವೃದ್ಧಿ ಎಂದರೆ ಬರೀ ರಸ್ತೆ ನಿರ್ಮಾಣ, ಕಟ್ಟಡ ನಿರ್ಮಾಣ ಅಲ್ಲ.ವ್ಯಕ್ತಿಯೋರ್ವನ ಸಾಂಸ್ಕೃತಿಕ ಮನಸ್ಸು ಕಟ್ಟುವ ಕೆಲಸವು ಕೂಡ ಆಂತರಿಕ ಅಭಿವೃದ್ಧಿಯೇ. ಯುವ ಮನಸ್ಸುಗಳನ್ನು ಸಾಂಸ್ಕೃತಿಕವಾಗಿ ಕಟ್ಟದೆ ಹೋದಲ್ಲಿ ಭಾರತದ ನೈಜ ಸಾಂಸ್ಕೃತಿಕ ವಿಶ್ವರೂಪ ದರ್ಶನ ದೊರೆಯದ ಸಾಧ್ಯವಿಲ್ಲ. ಭಾರತೀಯ ಕಲಾ ಪ್ರಕಾರಗಳೆಲ್ಲವು ಸಾಮಾಜಿಕ ಮೌಲ್ಯಗಳ ಅಂತ್ಹಸತ್ವ ಅಧರಿಸಿದವುಗಳು. ಭಾರತೀಯ ಸಂಸ್ಕೃತಿಯ ನಾಟಕ ,ಯಕ್ಷಗಾನ, ಸಂಗೀತಗಳು ಮನೋರಂಜನಾ ಕಾರ್ಯಕ್ರಮಗಳಲ್ಲ. ಅದು ಕಲೆ ಸಂಸ್ಕೃತಿ, ಸಂಸ್ಕಾರ , ಆಚರಣೆ, ಆಚಾರ ವಿಚಾರಗಳ ಮನೋವಿಕಾಸದ ಒಟ್ಟು ಸಂಕಲನ.

ಈ ನೆಲದ ಮಣ್ಣಿನ ಜೀವಂತಿಕೆಯನ್ನು ,ಅದರ ಸಾರವನ್ನು,ಈ ದೇಶ ಪ್ರತಿಪಾದಿಸಿದ ಜೀವನ ಮೌಲ್ಯವನ್ನು ತಿಳಿಸುವ ಪ್ರಯತ್ನವೆ ಸಾಂಸ್ಕೃತಿಕ ಪ್ರತಿಷ್ಠಾನದ ಉದ್ದೇಶ ಆಗಿದೆ. ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಕಳೆದ 15 ವರ್ಷಗಳಿಂದ ಇದೇ ವಿಚಾರದಲ್ಲಿ ನಂಬಿಕೆಯಿಟ್ಟು ಬೆಳೆದಿದೆ. ಪಾಡ್ದನ, ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ಮೈಸೂರಿನ ರಂಗಾಯಣದಂತಹ ರಂಗ ಶಾಲೆಗಳನ್ನು ತೆರೆಯುವ ಆಲೋಚನೆಗಳಿವೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ತಿಳಿಸಿದರು. ಮಾಹಿತಿಗಾಗಿ ಅವರ ಪೋನ್ ನಂಬರ್ – 96633 73940

Related posts

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ.) , ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಪ್ರಥಮ ತಾಲೂಕು ಅಧಿವೇಶನ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya
error: Content is protected !!