July 29, 2026
Uncategorized

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

ಬೆಳ್ತಂಗಡಿ:ಅಭಿವೃದ್ಧಿ ಎಂದರೆ ಬರೀ ರಸ್ತೆ ನಿರ್ಮಾಣ, ಕಟ್ಟಡ ನಿರ್ಮಾಣ ಅಲ್ಲ.ವ್ಯಕ್ತಿಯೋರ್ವನ ಸಾಂಸ್ಕೃತಿಕ ಮನಸ್ಸು ಕಟ್ಟುವ ಕೆಲಸವು ಕೂಡ ಆಂತರಿಕ ಅಭಿವೃದ್ಧಿಯೇ. ಯುವ ಮನಸ್ಸುಗಳನ್ನು ಸಾಂಸ್ಕೃತಿಕವಾಗಿ ಕಟ್ಟದೆ ಹೋದಲ್ಲಿ ಭಾರತದ ನೈಜ ಸಾಂಸ್ಕೃತಿಕ ವಿಶ್ವರೂಪ ದರ್ಶನ ದೊರೆಯದ ಸಾಧ್ಯವಿಲ್ಲ. ಭಾರತೀಯ ಕಲಾ ಪ್ರಕಾರಗಳೆಲ್ಲವು ಸಾಮಾಜಿಕ ಮೌಲ್ಯಗಳ ಅಂತ್ಹಸತ್ವ ಅಧರಿಸಿದವುಗಳು. ಭಾರತೀಯ ಸಂಸ್ಕೃತಿಯ ನಾಟಕ ,ಯಕ್ಷಗಾನ, ಸಂಗೀತಗಳು ಮನೋರಂಜನಾ ಕಾರ್ಯಕ್ರಮಗಳಲ್ಲ. ಅದು ಕಲೆ ಸಂಸ್ಕೃತಿ, ಸಂಸ್ಕಾರ , ಆಚರಣೆ, ಆಚಾರ ವಿಚಾರಗಳ ಮನೋವಿಕಾಸದ ಒಟ್ಟು ಸಂಕಲನ.

ಈ ನೆಲದ ಮಣ್ಣಿನ ಜೀವಂತಿಕೆಯನ್ನು ,ಅದರ ಸಾರವನ್ನು,ಈ ದೇಶ ಪ್ರತಿಪಾದಿಸಿದ ಜೀವನ ಮೌಲ್ಯವನ್ನು ತಿಳಿಸುವ ಪ್ರಯತ್ನವೆ ಸಾಂಸ್ಕೃತಿಕ ಪ್ರತಿಷ್ಠಾನದ ಉದ್ದೇಶ ಆಗಿದೆ. ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಕಳೆದ 15 ವರ್ಷಗಳಿಂದ ಇದೇ ವಿಚಾರದಲ್ಲಿ ನಂಬಿಕೆಯಿಟ್ಟು ಬೆಳೆದಿದೆ. ಪಾಡ್ದನ, ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ಮೈಸೂರಿನ ರಂಗಾಯಣದಂತಹ ರಂಗ ಶಾಲೆಗಳನ್ನು ತೆರೆಯುವ ಆಲೋಚನೆಗಳಿವೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ತಿಳಿಸಿದರು. ಮಾಹಿತಿಗಾಗಿ ಅವರ ಪೋನ್ ನಂಬರ್ – 96633 73940

Related posts

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಮ್.ಡಿ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಕುಸುಮಾವತಿಯವರೊಂದಿಗೆ ಮಾತುಕತೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya
error: Content is protected !!