23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆ. 28 ರಂದು ಆಚರಿಸಲಾಯಿತು.

ಕಾರ್ಯಕ್ರಮದ ಪ್ರಯುಕ್ತ ನಡೆದ ‘ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳ ಪ್ರದರ್ಶನ’ ವನ್ನು ಎಸ್ ಡಿ ಎಮ್ ಶಿಕ್ಷಕರ ತರಬೇತಿ ಸಂಸ್ಥೆ , ಉಜಿರೆ ಇಲ್ಲಿನ ಸಹಾಯಕ ಪ್ರಾಧ್ಯಾಪಕ ಮಂಜು ಆರ್ ಉದ್ಘಾಟಿಸಿ ಮಾತನಾಡಿ ‘ವಿದ್ಯಾರ್ಥಿಗಳಿಗೆ ದಿನನಿತ್ಯದಲ್ಲಿ ವಿಜ್ಞಾನ , ವಿಜ್ಞಾನದ ಕೌತುಕಗಳು , ನವೀನ ಆವಿಷ್ಕಾರಗಳು ಹಾಗೂ ವೈಜ್ಞಾನಿಕ ಕ್ಷೇತ್ರದ ಅಭೂತಪೂರ್ವವಾದ ಬೆಳವಣಿಗೆಯ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ರಾಷ್ಟ್ರೀಯ ವಿಜ್ಞಾನ ದಿನದ ವೈಶಿಷ್ಟ್ಯತೆಗಳ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು . ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಬಗ್ಗೆ ಭಾಷಣವನ್ನು ಏರ್ಪಡಿಸಲಾಗಿತ್ತು.

ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶಿಕ್ಷಕಿ ಕು| ಜಿತೀಕ್ಷ ರವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಶೀಲಾ.ಎನ್ ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya
error: Content is protected !!