24 C
ಪುತ್ತೂರು, ಬೆಳ್ತಂಗಡಿ
February 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

ಬೆಳ್ತಂಗಡಿ : ವಕೀಲರ ಸಂಘ (ರಿ ) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದ ಕಟ್ಟಡ ನಿರ್ಮಾಣಕ್ಕೆ ಮನವಿಯನ್ನು ಸಲ್ಲಿಸಲಾಯಿತು ಮತ್ತು ವಕೀಲರ ಭವನದ ಕಟ್ಟಡಕ್ಕೆ ಲಿಫ್ಟಿನ ವ್ಯವಸ್ಥೆಯನ್ನು ಮಾಡುವಂತೆ ಮನವಿಯನ್ನು ನೀಡಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ವಹಿಸಿದ್ದರು, ವೇದಿಕೆಯಲ್ಲಿ ಹಿರಿಯ ಸಮಿತಿಯ ಅಧ್ಯಕ್ಷರಾದ ಅಲೋಸಿಸ್ ಎಸ್ ಲೋಬೊ, ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ ಕೆ ಮತ್ತು ಉಪಾಧ್ಯಕ್ಷರಾದ ಅಶೋಕ ಕರಿಯನೆಲ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮನವಿಯನ್ನು ಹಿರಿಯ ವಕೀಲರಾದ ಬಿಕೆ ಧನಂಜಯ ರಾವ್ ರವರು ವಾಚಿಸಿದರು. ಸನ್ಮಾನ ಪತ್ರವನ್ನು ಅಲೋಸಿಯಸ್ ಎಸ್ ಲೋಬೋ ರವರು ವಾಚಿಸಿದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ, ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ಕಿರಿಯ ವಕೀಲರಗಳು, ಗಣ್ಯರು ಹಾಗೂ ಪತ್ರಿಕಾ ಮಾಧ್ಯಮದವರು ಉಪಸ್ಥಿರಿದ್ದರು.

ಕಾರ್ಯಕ್ರಮ ನಿರೂಪಣೆಯನ್ನು ವಕೀಲರಾದ ಸೇವಿಯರ್ ಪಾಲೆಲಿ ಹಾಗೂ ಧನ್ಯವಾದವನ್ನು ಅಸ್ಮ ನೆರವೇರಿಸಿದರು.

Related posts

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!