April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

ಉಜಿರೆ: “ವಿದ್ಯಾರ್ಥಿಗಳಲ್ಲಿ ಬರೀ ಜ್ಞಾನ ಸಾಲದು, ಜ್ಞಾನದ ಜೊತೆ ಕೌಶಲ್ಯಗಳ ಅಗತ್ಯತೆ ಇದೆ” ಎಂದು ರಾಮನ್ ಪರಿಣಾಮವನ್ನು ಪ್ರಾತ್ಯಕ್ಷಿಕೆಯ ಮೂಲಕ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನ ಉಪನ್ಯಾಸಕಿ ಡಾ. ನೆಫಿಸತ್.ಪಿ ವಿದ್ಯಾರ್ಥಿಗಳೊಂದಿಗೆ ವಿಷಯ ವಿವರಿಸಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಿ.ವಿ ರಾಮನ್ ಅವರ ಸಾಶೋಧನೆಯಾದ ‘ರಾಮನ್ ಪರಿಣಾಮ’ಕ್ಕೆ ನೋಬೆಲ್ ಪ್ರಶಸ್ತಿ ದೊರೆತ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಿದ ವಿಜ್ಞಾನ ದಿನದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಪೋಸ್ಟರ್ ಮೇಕಿಂಗ್, ವಿಜ್ಞಾನ ಮಾದರಿ ತಯಾರಿ, ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಶಶಿಧರ್ ವಂದಿಸಿ, ನಿನಾದ್ ನಿರೂಪಿಸಿದರು.

Related posts

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya
error: Content is protected !!