25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೆ ಏರಿದ್ದು ಅಭಿವೃದ್ಧಿ ಹೊಂದಲಿರುವ ಉಜಿರೆ- ಪೆರಿಯಶಾಂತಿ ನಡುವಿನ ರಸ್ತೆಯ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಮೀಸಲಿರಿಸಿದ್ದು ಇದರ ಒಂದೊಂದೇ ಹಂತದ ಸಮೀಕ್ಷೆಗಳು ನಡೆಯುತ್ತಿದ್ದು, ಉಜಿರೆಯಿಂದ ಧರ್ಮಸ್ಥಳ ತನಕ ರಸ್ತೆ ಅಭಿವೃದ್ಧಿಗೆ ತೆರವುಗೊಳ್ಳಲಿರುವ ಖಾಸಗಿ ಜಾಗಗಳಲ್ಲಿರುವ ಮರಗಳ ಸಮೀಕ್ಷೆ ನಡೆಯುತ್ತಿದೆ.
ಕೆಲವೆಡೆ ಚತುಷ್ಪಥ, ಕೆಲವೆಡೆ ದ್ವಿಪಥವಾಗಿ ನಿರ್ಮಾಣಗೊಳ್ಳಲಿರುವ ಈ ರಸ್ತೆಯ ಅಭಿವೃದ್ಧಿ ವೇಳೆ ಹಲವು ಮರಗಳು ತೆರವುಗೊಳ್ಳಬೇಕಿದೆ. ಇದರ ಪ್ರಥಮ ಅಂಗವಾಗಿ ಖಾಸಗಿ ಜಾಗದಲ್ಲಿರುವ ಮರಗಳನ್ನು ಗುರುತಿಸಲಾಗುತ್ತಿದೆ. ತೆರವುಗೊಳ್ಳುವ ಪ್ರತಿ ಮರಕ್ಕೆ ಮೌಲ್ಯ ನಿಗದಿಪಡಿಸಿ‌ಕಟಾವಿನ ವೇಳೆ ಸ್ಥಳದ ಮಾಲೀಕರಿಗೆ ನೀಡಲಾಗುತ್ತದೆ.

ಸಮೀಕ್ಷೆ ಕಾರ್ಯದಲ್ಲಿ ಭೂಸ್ವಾಧೀನ ಅಧಿಕಾರಿ ಕಚೇರಿಯ ಆರ್ ಐ ನವೀನ್ ಕುಮಾರ್, ಸರ್ವೆಯರ್ ಕೃಷ್ಣಪ್ರಸಾದ್,ಬೆಳ್ತಂಗಡಿ ಅರಣ್ಯ ವಲಯದ ಡಿಆರ್ ಎಫ್ ಒ ರವಿಚಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya
error: Content is protected !!