April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೆ ಏರಿದ್ದು ಅಭಿವೃದ್ಧಿ ಹೊಂದಲಿರುವ ಉಜಿರೆ- ಪೆರಿಯಶಾಂತಿ ನಡುವಿನ ರಸ್ತೆಯ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಮೀಸಲಿರಿಸಿದ್ದು ಇದರ ಒಂದೊಂದೇ ಹಂತದ ಸಮೀಕ್ಷೆಗಳು ನಡೆಯುತ್ತಿದ್ದು, ಉಜಿರೆಯಿಂದ ಧರ್ಮಸ್ಥಳ ತನಕ ರಸ್ತೆ ಅಭಿವೃದ್ಧಿಗೆ ತೆರವುಗೊಳ್ಳಲಿರುವ ಖಾಸಗಿ ಜಾಗಗಳಲ್ಲಿರುವ ಮರಗಳ ಸಮೀಕ್ಷೆ ನಡೆಯುತ್ತಿದೆ.
ಕೆಲವೆಡೆ ಚತುಷ್ಪಥ, ಕೆಲವೆಡೆ ದ್ವಿಪಥವಾಗಿ ನಿರ್ಮಾಣಗೊಳ್ಳಲಿರುವ ಈ ರಸ್ತೆಯ ಅಭಿವೃದ್ಧಿ ವೇಳೆ ಹಲವು ಮರಗಳು ತೆರವುಗೊಳ್ಳಬೇಕಿದೆ. ಇದರ ಪ್ರಥಮ ಅಂಗವಾಗಿ ಖಾಸಗಿ ಜಾಗದಲ್ಲಿರುವ ಮರಗಳನ್ನು ಗುರುತಿಸಲಾಗುತ್ತಿದೆ. ತೆರವುಗೊಳ್ಳುವ ಪ್ರತಿ ಮರಕ್ಕೆ ಮೌಲ್ಯ ನಿಗದಿಪಡಿಸಿ‌ಕಟಾವಿನ ವೇಳೆ ಸ್ಥಳದ ಮಾಲೀಕರಿಗೆ ನೀಡಲಾಗುತ್ತದೆ.

ಸಮೀಕ್ಷೆ ಕಾರ್ಯದಲ್ಲಿ ಭೂಸ್ವಾಧೀನ ಅಧಿಕಾರಿ ಕಚೇರಿಯ ಆರ್ ಐ ನವೀನ್ ಕುಮಾರ್, ಸರ್ವೆಯರ್ ಕೃಷ್ಣಪ್ರಸಾದ್,ಬೆಳ್ತಂಗಡಿ ಅರಣ್ಯ ವಲಯದ ಡಿಆರ್ ಎಫ್ ಒ ರವಿಚಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya
error: Content is protected !!