July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೆ ಏರಿದ್ದು ಅಭಿವೃದ್ಧಿ ಹೊಂದಲಿರುವ ಉಜಿರೆ- ಪೆರಿಯಶಾಂತಿ ನಡುವಿನ ರಸ್ತೆಯ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಮೀಸಲಿರಿಸಿದ್ದು ಇದರ ಒಂದೊಂದೇ ಹಂತದ ಸಮೀಕ್ಷೆಗಳು ನಡೆಯುತ್ತಿದ್ದು, ಉಜಿರೆಯಿಂದ ಧರ್ಮಸ್ಥಳ ತನಕ ರಸ್ತೆ ಅಭಿವೃದ್ಧಿಗೆ ತೆರವುಗೊಳ್ಳಲಿರುವ ಖಾಸಗಿ ಜಾಗಗಳಲ್ಲಿರುವ ಮರಗಳ ಸಮೀಕ್ಷೆ ನಡೆಯುತ್ತಿದೆ.
ಕೆಲವೆಡೆ ಚತುಷ್ಪಥ, ಕೆಲವೆಡೆ ದ್ವಿಪಥವಾಗಿ ನಿರ್ಮಾಣಗೊಳ್ಳಲಿರುವ ಈ ರಸ್ತೆಯ ಅಭಿವೃದ್ಧಿ ವೇಳೆ ಹಲವು ಮರಗಳು ತೆರವುಗೊಳ್ಳಬೇಕಿದೆ. ಇದರ ಪ್ರಥಮ ಅಂಗವಾಗಿ ಖಾಸಗಿ ಜಾಗದಲ್ಲಿರುವ ಮರಗಳನ್ನು ಗುರುತಿಸಲಾಗುತ್ತಿದೆ. ತೆರವುಗೊಳ್ಳುವ ಪ್ರತಿ ಮರಕ್ಕೆ ಮೌಲ್ಯ ನಿಗದಿಪಡಿಸಿ‌ಕಟಾವಿನ ವೇಳೆ ಸ್ಥಳದ ಮಾಲೀಕರಿಗೆ ನೀಡಲಾಗುತ್ತದೆ.

ಸಮೀಕ್ಷೆ ಕಾರ್ಯದಲ್ಲಿ ಭೂಸ್ವಾಧೀನ ಅಧಿಕಾರಿ ಕಚೇರಿಯ ಆರ್ ಐ ನವೀನ್ ಕುಮಾರ್, ಸರ್ವೆಯರ್ ಕೃಷ್ಣಪ್ರಸಾದ್,ಬೆಳ್ತಂಗಡಿ ಅರಣ್ಯ ವಲಯದ ಡಿಆರ್ ಎಫ್ ಒ ರವಿಚಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ಮುಂಡಾಜೆ: ಜಿ.ಎನ್.ಭಿಡೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!