ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೆ ಏರಿದ್ದು ಅಭಿವೃದ್ಧಿ ಹೊಂದಲಿರುವ ಉಜಿರೆ- ಪೆರಿಯಶಾಂತಿ ನಡುವಿನ ರಸ್ತೆಯ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಮೀಸಲಿರಿಸಿದ್ದು ಇದರ ಒಂದೊಂದೇ ಹಂತದ ಸಮೀಕ್ಷೆಗಳು ನಡೆಯುತ್ತಿದ್ದು, ಉಜಿರೆಯಿಂದ ಧರ್ಮಸ್ಥಳ ತನಕ ರಸ್ತೆ ಅಭಿವೃದ್ಧಿಗೆ ತೆರವುಗೊಳ್ಳಲಿರುವ ಖಾಸಗಿ ಜಾಗಗಳಲ್ಲಿರುವ ಮರಗಳ ಸಮೀಕ್ಷೆ ನಡೆಯುತ್ತಿದೆ.
ಕೆಲವೆಡೆ ಚತುಷ್ಪಥ, ಕೆಲವೆಡೆ ದ್ವಿಪಥವಾಗಿ ನಿರ್ಮಾಣಗೊಳ್ಳಲಿರುವ ಈ ರಸ್ತೆಯ ಅಭಿವೃದ್ಧಿ ವೇಳೆ ಹಲವು ಮರಗಳು ತೆರವುಗೊಳ್ಳಬೇಕಿದೆ. ಇದರ ಪ್ರಥಮ ಅಂಗವಾಗಿ ಖಾಸಗಿ ಜಾಗದಲ್ಲಿರುವ ಮರಗಳನ್ನು ಗುರುತಿಸಲಾಗುತ್ತಿದೆ. ತೆರವುಗೊಳ್ಳುವ ಪ್ರತಿ ಮರಕ್ಕೆ ಮೌಲ್ಯ ನಿಗದಿಪಡಿಸಿ‌ಕಟಾವಿನ ವೇಳೆ ಸ್ಥಳದ ಮಾಲೀಕರಿಗೆ ನೀಡಲಾಗುತ್ತದೆ.

ಸಮೀಕ್ಷೆ ಕಾರ್ಯದಲ್ಲಿ ಭೂಸ್ವಾಧೀನ ಅಧಿಕಾರಿ ಕಚೇರಿಯ ಆರ್ ಐ ನವೀನ್ ಕುಮಾರ್, ಸರ್ವೆಯರ್ ಕೃಷ್ಣಪ್ರಸಾದ್,ಬೆಳ್ತಂಗಡಿ ಅರಣ್ಯ ವಲಯದ ಡಿಆರ್ ಎಫ್ ಒ ರವಿಚಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ಮುಂಡೂರು ಮಂಗಳಗಿರಿ ಶ್ರೀ ನಾಗಂಬಿಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ಕೊಡುಗೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya
error: Content is protected !!