23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

ಬೆಳ್ತಂಗಡಿ: ಬೆಂಗಳೂರಿನ ಜೈನ್ ಯುನಿವರ್ಸಿಟಿ ಯಲ್ಲಿ ನಡೆದ ರಾಷ್ಟ್ರ ಮಟ್ಟದ ನಾಟಕ ಸ್ಪರ್ಧೆ ಅಭಿನಯದಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜಿನ ಭೀಷ್ಮಾಸ್ತಮಾನ ನಾಟಕ ಪ್ರಥಮ ಸ್ಥಾನ ಗಳಿಸಿದೆ.

ಸ್ಪರ್ಧೆಯು ಎರಡು ಹಂತದಲ್ಲಿ ನಡೆದಿದ್ದು, ಮೊದಲ ಸುತ್ತಿನಲ್ಲಿ 25 ಕ್ಕೂ ಅಧಿಕ ತಂಡಗಳು ಭಾಗವಹಿಸಿ, 6 ತಂಡಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು.

ಭೀಷ್ಮಾಸ್ತಮಾನವು ಅತ್ಯುತ್ತಮ ನಾಟಕ ಪ್ರಶಸ್ತಿಯ ಜತೆಗೆ 9 ವೈಯಕ್ತಿಕ ಪ್ರಶಸ್ತಿಗಳ ಪೈಕಿ 6ನ್ನು ಗೆದ್ದುಕೊಂಡಿದೆ. ರಂಗ ನಿರ್ದೇಶಕ ಯಶವಂತ್ ಬೆಳ್ತಂಗಡಿ (ಅತ್ಯುತ್ತಮ ನಿರ್ದೇಶನ), ಶ್ರೀಕೃಷ್ಣ ಪಾತ್ರಧಾರಿ ಅಮಿತ್ ಕುಮಾರ್ (ಅತ್ಯುತ್ತಮ ನಟ), ಅರ್ಜುನ ಪಾತ್ರಧಾರಿ ಅಮೃತವರ್ಷಿಣಿ (ಅತ್ಯುತ್ತಮ ನಟಿ), ಮದನ್ ಮತ್ತು ಸುಬ್ರಹ್ಮಣ್ಯ ತಂಡ (ಅತ್ಯುತ್ತಮ ಸಂಗೀತ), ಅಶ್ವಿತ್ ಮತ್ತು ಆಯುಷ್ಮಾನ್ (ಅತ್ಯುತ್ತಮ ಬೆಳಕಿನ ವಿನ್ಯಾಸ) ಪ್ರಶಸ್ತಿ ಪಡೆದಿದ್ದು, ಅತ್ಯುತ್ತಮ ರಂಗಸಜ್ಜಿಕೆ ಪ್ರಶಸ್ತಿಯನ್ನೂ ಗೆದ್ದುಕೊಂಡಿದೆ.

ವ್ಯಾಸ ವಿರಚಿತ ಮಹಾಭಾರತ, ಕುಮಾರವ್ಯಾಸ ಭಾರತ, ಭಗವದ್ಗೀತೆ ಹಾಗೂ ಇತರ ಕೆಲವು ಪೌರಾಣಿಕ ಆಕರಗಳಿಂದ ಪ್ರೇರಿತಗೊಂಡಿರುವ, ಎಸ್ ಡಿಎಂ ಕಲಾ ಕೇಂದ್ರ ಪ್ರಸ್ತುತಪಡಿಸಿದ ಈ ನಾಟಕವನ್ನು ಕಾಲೇಜಿನ ಹಿರಿಯ ವಿದ್ಯಾರ್ಥಿ ಸ್ಕಂದ ಭಾರ್ಗವ ರಚಿಸಿದ್ದು, ಕೇಂದ್ರದ ರಂಗ ನಿರ್ದೇಶಕ ಯಶವಂತ್ ಬೆಳ್ತಂಗಡಿ (ನೀನಾಸಂ) ನಿರ್ದೇಶಿಸಿದ್ದಾರೆ. ಅಂತಿಮ ಪದವಿ ವಿದ್ಯಾರ್ಥಿಗಳಾದ ಮದನ್ ಎಂ. ಸಂಗೀತ ನೀಡಿದ್ದು, ಸುಬ್ರಹ್ಮಣ್ಯ ಜಿ. ಭಟ್ ಪಕ್ಕವಾದ್ಯದಲ್ಲಿ ಮತ್ತು ಗೌರವಿ ಹಿನ್ನೆಲೆ ಸಂಗೀತದಲ್ಲಿ ಸಾಥ್ ನೀಡಿದ್ದರು.

(ಧೃತರಾಷ್ಟ್ರ), ದ್ವಿತೀಯ ಎಂಎಸ್ಸಿ ವಿದ್ಯಾರ್ಥಿನಿ ಸೋನಾಕ್ಷಿ (ಶಿಖಂಡಿ), ತೃತೀ ಯ ಪದವಿ ವಿದ್ಯಾರ್ಥಿಗಳಾದ ರಾಜೇಶ್ (ಭೀಷ್ಮ), ಸುಜಿತ್ (ಸಂಜಯ), ಹರ್ಷ (ಧರ್ಮರಾಯ), ಉಲ್ಲೇಖ (ಬ್ರೌಪದಿ), ದ್ವಿತೀಯ ಪದವಿ ವಿದ್ಯಾರ್ಥಿಗಳಾದ ಜ್ಯೋತಿಕ (ಸೂತ್ರಧಾರ), ನೂತನ್ (ಎಷ್ಟು), ಭೂಷಣ್ (ಭೀಮಸೇನ) ಹಾಗೂ ಕನ್ನಿಕಾ ಎಸ್. (ಗಾಂಧಾರಿ) ಮತ್ತು (ಗಂಗೆ) ಪ್ರಮುಖ ಪಾತ್ರಗಳಿಗೆ ಜೀವ ತುಂಬಿದರು. ಮೇಳದಲ್ಲಿ ದ್ವಿತೀಯ ಪದವಿ ಯ ಮಾಧವ್, ವೈಶಾಖ್, ಆದಿತ್ಯ, ಅಕ್ಷರಿ ಮತ್ತು ಕನಿಷ್ಠಾ ಪಾತ್ರ ನಿರ್ವಹಿಸಿದರು.

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya
error: Content is protected !!