24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

ಬೆಳ್ತಂಗಡಿ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಮತ್ತು ಕಲ್ಮಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇತ್ರಾವತಿ ನದಿಯ ನಿಡಿಗಲ್ ಸೇತುವೆಗಳಿಗೆ ಕಲ್ಮಂಜ ಗ್ರಾಮ ಪಂಚಾಯಿತಿ ವತಿಯಿಂದ ಸಿಸಿಟಿವಿ ಅಳವಡಿಸಲಾಗಿದೆ.

ಇಲ್ಲಿನ ಸೇತುವೆಗಳಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ತಂದು ಸುರಿಯುತ್ತಿದ್ದ ಭಾರಿ ಪ್ರಮಾಣದ ತ್ಯಾಜ್ಯ ನದಿಯ ಕಿಂಡಿ ಅಣೆಕಟ್ಟಿನಲ್ಲಿ ಸಂಗ್ರಹಗೊಂಡಿರುವ ನೀರನ್ನು ಸೇರಿ, ನೀರು ಮಲೀನಗೊಳ್ಳುವ ಸಾಧ್ಯತೆ ಇದ್ದು, ಈ ಕುರಿತು ವಿಜಯ ಕರ್ನಾಟಕದಲ್ಲಿ ವರದಿ ಪ್ರಕಟವಾಗಿತ್ತು. ಕಲ್ಮಂಜ ಮತ್ತು ಮುಂಡಾಜೆ ಗ್ರಾಮ ಪಂಚಾಯಿತಿ ಗ್ರಾಮ ಸಭೆಗಳಲ್ಲಿ ಈ ವಿಚಾರ ಭಾರಿ ಚರ್ಚೆಗೂ ಕಾರಣವಾಗಿತ್ತು.

ಎರಡು ಗ್ರಾಮ ಪಂಚಾಯಿತಿಗಳ ವತಿಯಿಂದ ಮಂಗಳವಾರ ಇಲ್ಲಿ ಸ್ವಚ್ಛತೆ ಕಾರ್ಯ ನಡೆದ ಬಳಿಕ ಕಲ್ಮಂಜ ಗ್ರಾಮ ಪಂಚಾಯಿತಿ ವತಿಯಿಂದ ಸೇತುವೆಗಳ ವ್ಯಾಪ್ತಿಗೆ ಸಿಸಿಟಿವಿ ಅಳವಡಿಸಲಾಗಿದೆ. ಇದರ ಚಿತ್ರಣಗಳು ಪಂಚಾಯಿತಿ ಹಾಗೂ ಅಗತ್ಯ ಸಿಬ್ಬಂದಿಗೆ ರವಾನೆಯಾಗುತ್ತವೆ. ಇದು ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಲು ಮಾಡಿರುವ ವ್ಯವಸ್ಥೆಯಾಗಿದ್ದು, ನದಿಯಲ್ಲಿ ಸಂಗ್ರಹಗೊಂಡಿರುವ ನೀರನ್ನು ಕಲುಷಿತಗೊಳ್ಳದಂತೆ ಕಾಪಾಡುವುದು ಪಂಚಾಯಿತಿಯ ಕರ್ತವ್ಯವಾಗಿದೆ ಎಂದು ಕಲ್ಮಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ತಿಳಿಸಿದ್ದಾರೆ.

Related posts

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya
error: Content is protected !!