25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

ಬೆಳ್ತಂಗಡಿ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಮತ್ತು ಕಲ್ಮಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇತ್ರಾವತಿ ನದಿಯ ನಿಡಿಗಲ್ ಸೇತುವೆಗಳಿಗೆ ಕಲ್ಮಂಜ ಗ್ರಾಮ ಪಂಚಾಯಿತಿ ವತಿಯಿಂದ ಸಿಸಿಟಿವಿ ಅಳವಡಿಸಲಾಗಿದೆ.

ಇಲ್ಲಿನ ಸೇತುವೆಗಳಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ತಂದು ಸುರಿಯುತ್ತಿದ್ದ ಭಾರಿ ಪ್ರಮಾಣದ ತ್ಯಾಜ್ಯ ನದಿಯ ಕಿಂಡಿ ಅಣೆಕಟ್ಟಿನಲ್ಲಿ ಸಂಗ್ರಹಗೊಂಡಿರುವ ನೀರನ್ನು ಸೇರಿ, ನೀರು ಮಲೀನಗೊಳ್ಳುವ ಸಾಧ್ಯತೆ ಇದ್ದು, ಈ ಕುರಿತು ವಿಜಯ ಕರ್ನಾಟಕದಲ್ಲಿ ವರದಿ ಪ್ರಕಟವಾಗಿತ್ತು. ಕಲ್ಮಂಜ ಮತ್ತು ಮುಂಡಾಜೆ ಗ್ರಾಮ ಪಂಚಾಯಿತಿ ಗ್ರಾಮ ಸಭೆಗಳಲ್ಲಿ ಈ ವಿಚಾರ ಭಾರಿ ಚರ್ಚೆಗೂ ಕಾರಣವಾಗಿತ್ತು.

ಎರಡು ಗ್ರಾಮ ಪಂಚಾಯಿತಿಗಳ ವತಿಯಿಂದ ಮಂಗಳವಾರ ಇಲ್ಲಿ ಸ್ವಚ್ಛತೆ ಕಾರ್ಯ ನಡೆದ ಬಳಿಕ ಕಲ್ಮಂಜ ಗ್ರಾಮ ಪಂಚಾಯಿತಿ ವತಿಯಿಂದ ಸೇತುವೆಗಳ ವ್ಯಾಪ್ತಿಗೆ ಸಿಸಿಟಿವಿ ಅಳವಡಿಸಲಾಗಿದೆ. ಇದರ ಚಿತ್ರಣಗಳು ಪಂಚಾಯಿತಿ ಹಾಗೂ ಅಗತ್ಯ ಸಿಬ್ಬಂದಿಗೆ ರವಾನೆಯಾಗುತ್ತವೆ. ಇದು ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಲು ಮಾಡಿರುವ ವ್ಯವಸ್ಥೆಯಾಗಿದ್ದು, ನದಿಯಲ್ಲಿ ಸಂಗ್ರಹಗೊಂಡಿರುವ ನೀರನ್ನು ಕಲುಷಿತಗೊಳ್ಳದಂತೆ ಕಾಪಾಡುವುದು ಪಂಚಾಯಿತಿಯ ಕರ್ತವ್ಯವಾಗಿದೆ ಎಂದು ಕಲ್ಮಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ತಿಳಿಸಿದ್ದಾರೆ.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

Suddi Udaya

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಕಾಲ್ನಡಿಗೆ ಜಾಥಾ

Suddi Udaya
error: Content is protected !!