July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

ಬೆಳ್ತಂಗಡಿ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಮತ್ತು ಕಲ್ಮಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇತ್ರಾವತಿ ನದಿಯ ನಿಡಿಗಲ್ ಸೇತುವೆಗಳಿಗೆ ಕಲ್ಮಂಜ ಗ್ರಾಮ ಪಂಚಾಯಿತಿ ವತಿಯಿಂದ ಸಿಸಿಟಿವಿ ಅಳವಡಿಸಲಾಗಿದೆ.

ಇಲ್ಲಿನ ಸೇತುವೆಗಳಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ತಂದು ಸುರಿಯುತ್ತಿದ್ದ ಭಾರಿ ಪ್ರಮಾಣದ ತ್ಯಾಜ್ಯ ನದಿಯ ಕಿಂಡಿ ಅಣೆಕಟ್ಟಿನಲ್ಲಿ ಸಂಗ್ರಹಗೊಂಡಿರುವ ನೀರನ್ನು ಸೇರಿ, ನೀರು ಮಲೀನಗೊಳ್ಳುವ ಸಾಧ್ಯತೆ ಇದ್ದು, ಈ ಕುರಿತು ವಿಜಯ ಕರ್ನಾಟಕದಲ್ಲಿ ವರದಿ ಪ್ರಕಟವಾಗಿತ್ತು. ಕಲ್ಮಂಜ ಮತ್ತು ಮುಂಡಾಜೆ ಗ್ರಾಮ ಪಂಚಾಯಿತಿ ಗ್ರಾಮ ಸಭೆಗಳಲ್ಲಿ ಈ ವಿಚಾರ ಭಾರಿ ಚರ್ಚೆಗೂ ಕಾರಣವಾಗಿತ್ತು.

ಎರಡು ಗ್ರಾಮ ಪಂಚಾಯಿತಿಗಳ ವತಿಯಿಂದ ಮಂಗಳವಾರ ಇಲ್ಲಿ ಸ್ವಚ್ಛತೆ ಕಾರ್ಯ ನಡೆದ ಬಳಿಕ ಕಲ್ಮಂಜ ಗ್ರಾಮ ಪಂಚಾಯಿತಿ ವತಿಯಿಂದ ಸೇತುವೆಗಳ ವ್ಯಾಪ್ತಿಗೆ ಸಿಸಿಟಿವಿ ಅಳವಡಿಸಲಾಗಿದೆ. ಇದರ ಚಿತ್ರಣಗಳು ಪಂಚಾಯಿತಿ ಹಾಗೂ ಅಗತ್ಯ ಸಿಬ್ಬಂದಿಗೆ ರವಾನೆಯಾಗುತ್ತವೆ. ಇದು ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಲು ಮಾಡಿರುವ ವ್ಯವಸ್ಥೆಯಾಗಿದ್ದು, ನದಿಯಲ್ಲಿ ಸಂಗ್ರಹಗೊಂಡಿರುವ ನೀರನ್ನು ಕಲುಷಿತಗೊಳ್ಳದಂತೆ ಕಾಪಾಡುವುದು ಪಂಚಾಯಿತಿಯ ಕರ್ತವ್ಯವಾಗಿದೆ ಎಂದು ಕಲ್ಮಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ತಿಳಿಸಿದ್ದಾರೆ.

Related posts

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಉಜಿರೆ ಪ್ರಾಥಮಿಕ ಸಹಕಾರಿ ಸಂಘದ ಚುನಾವಣೆ: ಬಿಜೆಪಿ 7 – ಕಾಂಗ್ರೆಸ್ 5, ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!