21.6 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ವ್ಯಾಪಾರ ಮೇಳವು ಅಮೃತವರ್ಷಿಣಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಧರ್ಮಸ್ಥಳ ಬೀಡಿನ ಮ್ಯಾನೇಜರ್ ಸುರೇಂದ್ರ ಜೈನ್ ಅವರು ಪ್ರಾಥಮಿಕ ಶಾಲಾ ಹಂತದಲ್ಲಿಯೇ ನಿಖರವಾದ ತೂಕ, ಲಾಭ- ನಷ್ಟದ ವಿಚಾರಗಳು ಮಕ್ಕಳ ಬುದ್ಧಿಶಕ್ತಿಯನ್ನು ಚುರುಕಾಗಿಸುವುದರೊಂದಿಗೆ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗಿದ್ದು, ಶಾಲೆಯಲ್ಲಿ ಮಕ್ಕಳಿಗೆ ಬಾಲ್ಯದಿಂದಲೇ ಶಿಕ್ಷಣದ ಜೊತೆ ಜೊತೆಗೆ ವ್ಯಾವಹಾರಿಕ ಜ್ಞಾನ ಲಭಿಸುತ್ತಿರುವುದು ಸ್ವಾಗತಾರ್ಹ ಸಂಗತಿಯಾಗಿದೆ ಎಂದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ದೇವಳದ ಮಣೆಗಾರರಾದ ವಸಂತ ಭಟ್ ವಿದ್ಯಾರ್ಥಿಗಳು ತಾವು ಖರೀದಿಸುವ ವಸ್ತುಗಳ ನಿಖರವಾದ ಬೆಲೆ, ಕಾಲಕಾಲಕ್ಕೆ ಅವುಗಳಲ್ಲಾಗುವ ಏರಿಕೆ ಇಳಿಕೆಗಳ ಬಗ್ಗೆ ತಿಳಿದುಕೊಂಡು, ವ್ಯಾಪಾರಿಗಳೊಂದಿಗೆ ಚರ್ಚಿಸಿ ವ್ಯಾಪಾರದಲ್ಲಾಗುವ ಮೋಸವನ್ನು ತಡೆಯಲು ಕಲಿತುಕೊಳ್ಳಬೇಕು ಎಂದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಹಿಸಿಕೊಂಡು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಠ್ಯ ವಿಷಯದ ಜೊತೆಗೆ ವ್ಯಾಪಾರ ಮೇಳದಂತಹ ಕಾರ್ಯಕ್ರಮಗಳು ಸಹಕಾರಿ ಎಂದರು.
ಹಿರಿಯ ಶಿಕ್ಷಕ ಜೋಸೆಫ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀಮತಿ ಕಾವ್ಯ ಸ್ವಾಗತಿಸಿ, ಶ್ರೀಮತಿ ಸೀಮಾರವರು ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಶ್ರೀಮತಿ ಪೂರ್ಣಿಮಾ ಕೆ. ಎಂ ನಿರೂಪಿಸಿದರು.

ವಿದ್ಯಾರ್ಥಿಗಳ ಮನೆಯಲ್ಲಿ ಬೆಳೆದ ಸಾವಯವ ತರಕಾರಿಗಳು, ಹಣ್ಣುಗಳು, ವಿವಿಧ ಹೂವಿನಗಿಡಗಳು, ಹಣ್ಣಿನ ಗಿಡಗಳು, ಅಕ್ವೇರಿಯಂ, ರುಚಿಕರವಾದ ಬೀಟ್ರೂಟ್ ರೊಟ್ಟಿ, ಬಗೆಬಗೆಯ ಜ್ಯೂಸ್ ಗಳು, ರಾಜಸ್ಥಾನಿ ಆಲೂ ಚಾಟ್, ಮ್ಯಾಂಗೋ ಲಸ್ಸಿ, ಚುರುಮುರಿ, ಗ್ರಾಹಕರ ಮನಸ್ಸನ್ನು ಗೆದ್ದಿತು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya
error: Content is protected !!