24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆ .28ರಂದು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜ ರಜಪೂತ್ ರವರು ನಿರ್ವಹಿಸಿ ರಾಷ್ಟ್ರೀಯ ವಿಜ್ಞಾನ ದಿನದ ಬಗ್ಗೆ ಮಾತನಾಡಿದರು ಮತ್ತು ಭಾರತೀಯ ವಿಜ್ಞಾನಿಗಳ ಸಾಧನೆಗಳನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕ ಜೋಸೆಫ್ ರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶ್ರೀಮತಿ ಉಷಾ ,ಶ್ರೀ ಶೇಖರ್ ಗೌಡ., ಶ್ರೀಮತಿ ಕಾವ್ಯ ಇವರು ಆಧುನಿಕ ಯುಗದಲ್ಲಿ ವಿಜ್ಞಾನದ ಮಹತ್ವ ಮತ್ತು ವಿಜ್ಞಾನ ದಿನಾಚರಣೆಯನ್ನು ಆಚರಿಸಬೇಕಾದಂತಹ ಅವಶ್ಯಕತೆಗಳ ಬಗ್ಗೆ ವಿವರಣೆಯನ್ನು ನೀಡಿದರು. 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳನ್ನು ತಾವೇ ತಯಾರಿಸಿ ಪ್ರದರ್ಶನದಲ್ಲಿ ಭಾಗವಹಿಸಿ ವಿವರಣೆಗಳನ್ನು ನೀಡಿದರು .

ಕಾರ್ಯಕ್ರಮವನ್ನು ಶಿಕ್ಷಕಿ ಕೇಶವತಿ ನಿರ್ವಹಿಸಿ, ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ , ಶಿಕ್ಷಕಿ ಪೂರ್ಣಿಮಾ ಕೆ. ಎಂ ವಂದಿಸಿದರು.

Related posts

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya
error: Content is protected !!