July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆ .28ರಂದು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜ ರಜಪೂತ್ ರವರು ನಿರ್ವಹಿಸಿ ರಾಷ್ಟ್ರೀಯ ವಿಜ್ಞಾನ ದಿನದ ಬಗ್ಗೆ ಮಾತನಾಡಿದರು ಮತ್ತು ಭಾರತೀಯ ವಿಜ್ಞಾನಿಗಳ ಸಾಧನೆಗಳನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕ ಜೋಸೆಫ್ ರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶ್ರೀಮತಿ ಉಷಾ ,ಶ್ರೀ ಶೇಖರ್ ಗೌಡ., ಶ್ರೀಮತಿ ಕಾವ್ಯ ಇವರು ಆಧುನಿಕ ಯುಗದಲ್ಲಿ ವಿಜ್ಞಾನದ ಮಹತ್ವ ಮತ್ತು ವಿಜ್ಞಾನ ದಿನಾಚರಣೆಯನ್ನು ಆಚರಿಸಬೇಕಾದಂತಹ ಅವಶ್ಯಕತೆಗಳ ಬಗ್ಗೆ ವಿವರಣೆಯನ್ನು ನೀಡಿದರು. 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳನ್ನು ತಾವೇ ತಯಾರಿಸಿ ಪ್ರದರ್ಶನದಲ್ಲಿ ಭಾಗವಹಿಸಿ ವಿವರಣೆಗಳನ್ನು ನೀಡಿದರು .

ಕಾರ್ಯಕ್ರಮವನ್ನು ಶಿಕ್ಷಕಿ ಕೇಶವತಿ ನಿರ್ವಹಿಸಿ, ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ , ಶಿಕ್ಷಕಿ ಪೂರ್ಣಿಮಾ ಕೆ. ಎಂ ವಂದಿಸಿದರು.

Related posts

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಮದುವೆ ಸಮಾರಂಭದಲ್ಲಿ ಮೊಳಗಿದ ವಿಷ್ಣು ಸಹಸ್ರನಾಮ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!