29.2 C
ಪುತ್ತೂರು, ಬೆಳ್ತಂಗಡಿ
April 19, 2025
Uncategorized

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

ಬೆಳ್ತಂಗಡಿ:ಅಭಿವೃದ್ಧಿ ಎಂದರೆ ಬರೀ ರಸ್ತೆ ನಿರ್ಮಾಣ, ಕಟ್ಟಡ ನಿರ್ಮಾಣ ಅಲ್ಲ.ವ್ಯಕ್ತಿಯೋರ್ವನ ಸಾಂಸ್ಕೃತಿಕ ಮನಸ್ಸು ಕಟ್ಟುವ ಕೆಲಸವು ಕೂಡ ಆಂತರಿಕ ಅಭಿವೃದ್ಧಿಯೇ. ಯುವ ಮನಸ್ಸುಗಳನ್ನು ಸಾಂಸ್ಕೃತಿಕವಾಗಿ ಕಟ್ಟದೆ ಹೋದಲ್ಲಿ ಭಾರತದ ನೈಜ ಸಾಂಸ್ಕೃತಿಕ ವಿಶ್ವರೂಪ ದರ್ಶನ ದೊರೆಯದ ಸಾಧ್ಯವಿಲ್ಲ. ಭಾರತೀಯ ಕಲಾ ಪ್ರಕಾರಗಳೆಲ್ಲವು ಸಾಮಾಜಿಕ ಮೌಲ್ಯಗಳ ಅಂತ್ಹಸತ್ವ ಅಧರಿಸಿದವುಗಳು. ಭಾರತೀಯ ಸಂಸ್ಕೃತಿಯ ನಾಟಕ ,ಯಕ್ಷಗಾನ, ಸಂಗೀತಗಳು ಮನೋರಂಜನಾ ಕಾರ್ಯಕ್ರಮಗಳಲ್ಲ. ಅದು ಕಲೆ ಸಂಸ್ಕೃತಿ, ಸಂಸ್ಕಾರ , ಆಚರಣೆ, ಆಚಾರ ವಿಚಾರಗಳ ಮನೋವಿಕಾಸದ ಒಟ್ಟು ಸಂಕಲನ.

ಈ ನೆಲದ ಮಣ್ಣಿನ ಜೀವಂತಿಕೆಯನ್ನು ,ಅದರ ಸಾರವನ್ನು,ಈ ದೇಶ ಪ್ರತಿಪಾದಿಸಿದ ಜೀವನ ಮೌಲ್ಯವನ್ನು ತಿಳಿಸುವ ಪ್ರಯತ್ನವೆ ಸಾಂಸ್ಕೃತಿಕ ಪ್ರತಿಷ್ಠಾನದ ಉದ್ದೇಶ ಆಗಿದೆ. ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಕಳೆದ 15 ವರ್ಷಗಳಿಂದ ಇದೇ ವಿಚಾರದಲ್ಲಿ ನಂಬಿಕೆಯಿಟ್ಟು ಬೆಳೆದಿದೆ. ಪಾಡ್ದನ, ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ಮೈಸೂರಿನ ರಂಗಾಯಣದಂತಹ ರಂಗ ಶಾಲೆಗಳನ್ನು ತೆರೆಯುವ ಆಲೋಚನೆಗಳಿವೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ತಿಳಿಸಿದರು. ಮಾಹಿತಿಗಾಗಿ ಅವರ ಪೋನ್ ನಂಬರ್ – 96633 73940

Related posts

ಕುತ್ಲೂರಿನಲ್ಲಿ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ: ಪ್ರಯಾಣಿಕ ರಾಜೇಂದ್ರ ಆಳ್ವಾರಿಗೆ ಗಾಯ

Suddi Udaya

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಚಿಕ್ಕಮಗಳೂರು: ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬ ರು ವಶಕ್ಕೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya
error: Content is protected !!