23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

ಬೆಳ್ತಂಗಡಿ:ಅಭಿವೃದ್ಧಿ ಎಂದರೆ ಬರೀ ರಸ್ತೆ ನಿರ್ಮಾಣ, ಕಟ್ಟಡ ನಿರ್ಮಾಣ ಅಲ್ಲ.ವ್ಯಕ್ತಿಯೋರ್ವನ ಸಾಂಸ್ಕೃತಿಕ ಮನಸ್ಸು ಕಟ್ಟುವ ಕೆಲಸವು ಕೂಡ ಆಂತರಿಕ ಅಭಿವೃದ್ಧಿಯೇ. ಯುವ ಮನಸ್ಸುಗಳನ್ನು ಸಾಂಸ್ಕೃತಿಕವಾಗಿ ಕಟ್ಟದೆ ಹೋದಲ್ಲಿ ಭಾರತದ ನೈಜ ಸಾಂಸ್ಕೃತಿಕ ವಿಶ್ವರೂಪ ದರ್ಶನ ದೊರೆಯದ ಸಾಧ್ಯವಿಲ್ಲ. ಭಾರತೀಯ ಕಲಾ ಪ್ರಕಾರಗಳೆಲ್ಲವು ಸಾಮಾಜಿಕ ಮೌಲ್ಯಗಳ ಅಂತ್ಹಸತ್ವ ಅಧರಿಸಿದವುಗಳು. ಭಾರತೀಯ ಸಂಸ್ಕೃತಿಯ ನಾಟಕ ,ಯಕ್ಷಗಾನ, ಸಂಗೀತಗಳು ಮನೋರಂಜನಾ ಕಾರ್ಯಕ್ರಮಗಳಲ್ಲ. ಅದು ಕಲೆ ಸಂಸ್ಕೃತಿ, ಸಂಸ್ಕಾರ , ಆಚರಣೆ, ಆಚಾರ ವಿಚಾರಗಳ ಮನೋವಿಕಾಸದ ಒಟ್ಟು ಸಂಕಲನ.

ಈ ನೆಲದ ಮಣ್ಣಿನ ಜೀವಂತಿಕೆಯನ್ನು ,ಅದರ ಸಾರವನ್ನು,ಈ ದೇಶ ಪ್ರತಿಪಾದಿಸಿದ ಜೀವನ ಮೌಲ್ಯವನ್ನು ತಿಳಿಸುವ ಪ್ರಯತ್ನವೆ ಸಾಂಸ್ಕೃತಿಕ ಪ್ರತಿಷ್ಠಾನದ ಉದ್ದೇಶ ಆಗಿದೆ. ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಕಳೆದ 15 ವರ್ಷಗಳಿಂದ ಇದೇ ವಿಚಾರದಲ್ಲಿ ನಂಬಿಕೆಯಿಟ್ಟು ಬೆಳೆದಿದೆ. ಪಾಡ್ದನ, ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ಮೈಸೂರಿನ ರಂಗಾಯಣದಂತಹ ರಂಗ ಶಾಲೆಗಳನ್ನು ತೆರೆಯುವ ಆಲೋಚನೆಗಳಿವೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ತಿಳಿಸಿದರು. ಮಾಹಿತಿಗಾಗಿ ಅವರ ಪೋನ್ ನಂಬರ್ – 96633 73940

Related posts

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಆಪರೇಷನ್ ಸಿಂಧೂರ: ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!