July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆ. 28 ರಂದು ಆಚರಿಸಲಾಯಿತು.

ಕಾರ್ಯಕ್ರಮದ ಪ್ರಯುಕ್ತ ನಡೆದ ‘ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳ ಪ್ರದರ್ಶನ’ ವನ್ನು ಎಸ್ ಡಿ ಎಮ್ ಶಿಕ್ಷಕರ ತರಬೇತಿ ಸಂಸ್ಥೆ , ಉಜಿರೆ ಇಲ್ಲಿನ ಸಹಾಯಕ ಪ್ರಾಧ್ಯಾಪಕ ಮಂಜು ಆರ್ ಉದ್ಘಾಟಿಸಿ ಮಾತನಾಡಿ ‘ವಿದ್ಯಾರ್ಥಿಗಳಿಗೆ ದಿನನಿತ್ಯದಲ್ಲಿ ವಿಜ್ಞಾನ , ವಿಜ್ಞಾನದ ಕೌತುಕಗಳು , ನವೀನ ಆವಿಷ್ಕಾರಗಳು ಹಾಗೂ ವೈಜ್ಞಾನಿಕ ಕ್ಷೇತ್ರದ ಅಭೂತಪೂರ್ವವಾದ ಬೆಳವಣಿಗೆಯ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ರಾಷ್ಟ್ರೀಯ ವಿಜ್ಞಾನ ದಿನದ ವೈಶಿಷ್ಟ್ಯತೆಗಳ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು . ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಬಗ್ಗೆ ಭಾಷಣವನ್ನು ಏರ್ಪಡಿಸಲಾಗಿತ್ತು.

ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶಿಕ್ಷಕಿ ಕು| ಜಿತೀಕ್ಷ ರವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಶೀಲಾ.ಎನ್ ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

Suddi Udaya

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya
error: Content is protected !!