37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

ಬೆಳ್ತಂಗಡಿ : ವಕೀಲರ ಸಂಘ (ರಿ ) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದ ಕಟ್ಟಡ ನಿರ್ಮಾಣಕ್ಕೆ ಮನವಿಯನ್ನು ಸಲ್ಲಿಸಲಾಯಿತು ಮತ್ತು ವಕೀಲರ ಭವನದ ಕಟ್ಟಡಕ್ಕೆ ಲಿಫ್ಟಿನ ವ್ಯವಸ್ಥೆಯನ್ನು ಮಾಡುವಂತೆ ಮನವಿಯನ್ನು ನೀಡಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ವಹಿಸಿದ್ದರು, ವೇದಿಕೆಯಲ್ಲಿ ಹಿರಿಯ ಸಮಿತಿಯ ಅಧ್ಯಕ್ಷರಾದ ಅಲೋಸಿಸ್ ಎಸ್ ಲೋಬೊ, ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ ಕೆ ಮತ್ತು ಉಪಾಧ್ಯಕ್ಷರಾದ ಅಶೋಕ ಕರಿಯನೆಲ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮನವಿಯನ್ನು ಹಿರಿಯ ವಕೀಲರಾದ ಬಿಕೆ ಧನಂಜಯ ರಾವ್ ರವರು ವಾಚಿಸಿದರು. ಸನ್ಮಾನ ಪತ್ರವನ್ನು ಅಲೋಸಿಯಸ್ ಎಸ್ ಲೋಬೋ ರವರು ವಾಚಿಸಿದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ, ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ಕಿರಿಯ ವಕೀಲರಗಳು, ಗಣ್ಯರು ಹಾಗೂ ಪತ್ರಿಕಾ ಮಾಧ್ಯಮದವರು ಉಪಸ್ಥಿರಿದ್ದರು.

ಕಾರ್ಯಕ್ರಮ ನಿರೂಪಣೆಯನ್ನು ವಕೀಲರಾದ ಸೇವಿಯರ್ ಪಾಲೆಲಿ ಹಾಗೂ ಧನ್ಯವಾದವನ್ನು ಅಸ್ಮ ನೆರವೇರಿಸಿದರು.

Related posts

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ನಿಕಟ ಪೂರ್ವ ರಾಜಾಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿಯ ಶ್ರೀ ರಾಮಸ್ವಾಮಿ(ವಿಸಿಎನ್ಆರ್ ಗ್ರೂಪ್) ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!