23.1 C
ಪುತ್ತೂರು, ಬೆಳ್ತಂಗಡಿ
March 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

ಬೆಳ್ತಂಗಡಿ : ಕರಂಬಾರು ಗುತ್ತು ಪ್ರಸನ್ನ ಹೆಗ್ಡೆ ಹಾಗೂ ನವೀನ್ ಲೋಬೋ ಮಾಲಕತ್ವದ ಸ್ಕೈ ಎಲೆಕ್ಟ್ರಿಕಲ್ ಸೇವೆ ಹಾಗೂ ಪ್ರೈಮ್ ಅಸೋಸಿಯೇಟ್ ಅಳದಂಗಡಿ ಶಾಖೆ ಉದ್ಘಾಟನೆಯು ಅಳದಂಗಡಿ ಸೋಮನಾಥೇಶ್ವರಿ ದೇವಸ್ಥಾನದ ಬಳಿಯ ಪಾವನಿ ಕಾಂಪ್ಲೆಕ್ಸ್ ನಲ್ಲಿ ಫೆ.28ರಂದು ನಡೆಯಿತು.


ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ್ ಅಜಿಲರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಆಸುಪಾಸಿನ ಲೈನ್ ಮೆನ್ ಗಳನ್ನು ಸನ್ಮಾನಿಸುವುದರ ಮೂಲಕ ಮಾಲಕ ಪ್ರಸನ್ನ ಹೆಗ್ಡೆ ಮಾದರಿ ಕಾರ್ಯಕ್ರಮಕ್ಕೆ ನಾಂದಿ ಹಾಡಿದರು. ಸರಿಸುಮಾರು 20 ಮಂದಿ ಮೆಸ್ಕಾಂ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

ಇದೇ ಕಾರ್ಯಕ್ರಮದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಚಿಂತಕರಾದ ನಿರಂಜನ್ ಜೈನ್ ಕುದ್ಯಾಡಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಿವಪ್ರಸಾದ್ ಅಜಿಲರು, ಉದ್ಯಮಿಗಳಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಡಾ. ಶಶಿಧರ್ ಡೋಂಗ್ರೆ, ಯೋಗೀಶ್ ನಡಕ್ಕರ, ಅಶ್ವಿನ್ ಪಿರೇರಾ ಮೂಡುಬಿದಿರೆ, ರವಿಪ್ರಸಾದ್ ಶೆಟ್ಟಿ ಮೂಡುಬಿದಿರೆ, ಸಂದೀಪ್ ಕುಮಾರ್ ಮೆಸ್ಕಾಂ ಇಂಜಿನಿಯರ್, ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸರಸ್ವತಿ, ಗ್ರಾಮ ಪಂಚಾಯತ್ ಅಧಿಕಾರಿ ಪೂರ್ಣಿಮಾ ಜೆ, ನಿತ್ಯಾನಂದ ಶೆಟ್ಟಿ ನೊಚ್ಚ ಭಾಗವಹಿಸಿ ಶುಭಕೋರಿದರು.

ಆಮಂತ್ರಣ ವಿಜಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶ್ರೀರಂಗ ಮಯ್ಯ ಸಹಕರಿಸಿದರು.

Related posts

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!