23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಫೆ.28 ರಂದು ಜರುಗಿತು.


ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಶುಭ ಹಾರೈಸಿದರು.‌
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಲಾವಣ್ಯ ಶೆಟ್ಟಿ ಅರ್ಕಜೆ, ಸದಸ್ಯರುಗಳಾದ ಯೋಗೀಶ್ ಕುಮಾರ್, ಶ್ರೀಧರ್ ಕುಲಾಲ್, ಸಮೀರ್, ಗುರುವಾಯನಕೆರೆ ಸಿ ಆರ್ ಪಿ ರಾಜೇಶ್, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಶಾಲಾ ನಾಯಕಿ ಕುಮಾರಿ ಶಿವಾನಿ ಮತ್ತಿತರರು ಉಪಸ್ಥಿತರಿದ್ದರು.


ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಗೌರವಿಸಲಾಯಿತು.


ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ, ಬೆಳ್ತಂಗಡಿ ತಾಲೂಕಿನ ಶಿಕ್ಷಣ ಸಂಯೋಜಕರಾದ ಸಿದ್ದಲಿಂಗಸ್ವಾಮಿ ಆಗಮಿಸಿ ಶುಭ ಹಾರೈಸಿದರು.
ಗುರುವಾಯನಕೆರೆ ಕ್ಲಸ್ಟರ್ ಸಿ ಆರ್ ಪಿ ರಾಜೇಶ್ ಸ್ವಾಗತಿಸಿ ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಧನ್ಯವಾದ ಸಲ್ಲಿಸಿ, ಶಿಕ್ಷಕಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿ, ಅಧ್ಯಾಪಕ ವೃಂದ ಹಾಗೂ ಎಸ್ ಡಿ ಎಂ ಸಿ ಸದಸ್ಯರು ಸಹಕಾರ ನೀಡಿದರು.

Related posts

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya

ಕಾರು – ಬೈಕ್ ಅಪಘಾತ: ಬೈಕ್ ಸವಾರ ನಾವೂರಿನ ಚಂದ್ರಹಾಸ ಮೃತ್ಯು

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya
error: Content is protected !!