March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

ಗುರುವಾಯನಕೆರೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಮತ್ತು ಕರ್ನಾಟಕ ರಾಜ್ಯ ಎಸ್. ಡಿ. ಎಂ. ಸಿ ಸಮನ್ವಯ ಕೇಂದ್ರ ವೇದಿಕೆ, ಬೆಳ್ತಂಗಡಿ ಸಹಯೋಗದೊಂದಿಗೆ ಶಾಲಾ ಎಸ್. ಡಿ.ಎಂ.ಸಿ ಹಾಗೂ ಎ. ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಮಂಗಳೂರು ಇವರ ಸಹಯೋಗದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ ಜರುಗಿತು.

ಸಭಾ ಕಾರ್ಯಕ್ರಮದಲ್ಲಿ ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ವಹಿಸಿ ಶುಭ ಹಾರೈಸಿದರು. ಶಾಲಾ ಎಸ್. ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ಕವಿತಾ, ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಡಾ| ಶಿಲ್ಪ ಮತ್ತು ಡಾ| ರೇಷ್ಮಾ ಉಪಸ್ಥಿತರಿದ್ದು ಮಾಹಿತಿ ನೀಡಿದರು.

ಎಸ್‌.ಡಿ ಎಂ.ಸಿ ಸದಸ್ಯರು , ಡೆಂಟಲ್ ಸೈನ್ಸ್ ನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಒಟ್ಟು 111 ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಇದರ ಪ್ರಯೋಜನ ಪಡೆದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ. ಎನ್ ಸ್ವಾಗತಿಸಿದರು. ಶಿಕ್ಷಕಿ ವೇರೋನಿಕ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya
error: Content is protected !!